ಬೆಂಗಳೂರು: ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ 8 ಕೋಟಿ 45 ಲಕ್ಷದ 97 ಸಾವಿರ ರೂಪಾಯಿಗಳ ಕಾಣಿಕೆ ಹುಂಡಿ ಹಗರಣ ಸಂಬಂಧಿಸಿದಂತೆ ತನಿಖೆ ಮುಂದುವರಿಸಲು ಮುಂಬೈ ಹೈಕೋರ್ಟ್ ಅನಮತಿ ನೀಡಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ತುಳಜಾಭವಾನಿ ಮಾತೆಯ ಕೃಪೆಯಿಂದ ಕಳೆದ 9 ವರ್ಷಗಳಿಂದ ನ್ಯಾಯಾಂಗ ಹೋರಾಟ ನಡೆಸಿದ ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂ ವಿಧಿಜ್ಞ ಪರಿಷತ್ತ್ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದ್ದು, ಈ ನಿರ್ಧಾರವು ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ, ಗೋವಾ ಸೇರಿದಂತೆ ದೇಶದ ಕೋಟ್ಯಂತರ ಭಕ್ತರಿಗೆ ಸಂತಸ ಮತ್ತು ಸಮಾಧಾನ ತಂದಿದೆ.
ದೇವನಿಧಿ ಲೂಟಿ ಮಾಡುವ ಭ್ರಷ್ಟರಿಗೆ ಶಿಕ್ಷೆಯಾಗುವವರೆಗೂ ನಾವು ಈ ಪ್ರಕರಣವನ್ನು ಬೆನ್ನಹತ್ತುತ್ತೇವೆ ಎಂದು ಹಿಂದೂ ಜನಜಾಗೃತಿ ಸಮಿತಿಯು ರಾಷ್ಟ್ರೀಯ ವಕ್ತಾರ ರಮೇಶ್ ಶಿಂದೆ ಹೇಳಿದರು.