More

    ದಾನ, ಧರ್ಮದಿಂದ ಬದುಕು ಸಾರ್ಥಕ

    ಸೊರಬ: ಪ್ರತಿಯೊಬ್ಬರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ದಾನ, ಧರ್ಮ ಮಾಡುವ ಮನೋಭಾವ ರೂಢಿಸಿಕೊಂಡರೆ ಬದುಕು ಸಾರ್ಥಕವಾಗುತ್ತದೆ ಎಂದು ಜಡೆ ಹಿರೇಮಠ ಹಾಗೂ ಸೊರಬ ಕಾನುಕೇರಿ ಮಠದ ಶ್ರೀ ಘನಬಸವ ಅಮರೇಶ್ವರ ಸ್ವಾಮೀಜಿ ಹೇಳಿದರು.
    ತಾಲೂಕಿನ ಹಾಲಗಳಲೆ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ದೇವಸ್ಥಾನ ಸಮಿತಿಯಿಂದ ಮಂಗಳವಾರ ಶ್ರೀ ದೇವರಿಗೆ ಹಮ್ಮಿಕೊಂಡಿದ್ದ ಶತರುದ್ರಾಭಿಷೇಕ, ಕ್ಷೀರಾಭಿಷೇಕ, ಎಳನೀರ ಅಭಿಷೇಕ ಪೂಜೆ ನಂತರ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
    ಸಮಾಜದ ಏಳಿಗೆಗಾಗಿ ದಾನ, ಧರ್ಮದಲ್ಲಿ ತೊಡಗಿಸಿಕೊಳ್ಳಬೇಕು. ದುಡಿಮೆಯ ಕೊಂಚ ಭಾಗವನ್ನು ಧಾರ್ಮಿಕ ಕಾರ್ಯಗಳಿಗೆ ವಿನಿಯೋಗಿಸಿದರೆ ಆತ್ಮತೃಪ್ತಿ ದೊರೆಯುತ್ತದೆ. ಮಕ್ಕಳಲ್ಲಿ ಉತ್ತಮ ಗುಣಗಳು ಬೆಳೆದು ಸನ್ಮಾರ್ಗದಲ್ಲಿ ಸಾಗುತ್ತಾರೆ ಎಂದರು.
    ವೀರಭದ್ರ ಸ್ವಾಮಿಯನ್ನು ವೀರಶೈವ ಸಮಾಜ ಮಾತ್ರವಲ್ಲದೆ ಹಲವು ಸಮುದಾಯವರು ಆರಾಧನೆ ಮತ್ತು ಮನೆ ದೇವರಾಗಿ ಪೂಜಿಸುತ್ತಿದ್ದಾರೆ. ವೀರಭದ್ರನ ವೀರಗುಣಗಳನ್ನು ಪ್ರತಿಬಿಂಬಿಸುವ ಆರಾಧನೆಯು ಕಟ್ಟುನಿಟ್ಟಿನ ಆಚರಣೆಗಳು ಬಹು ಪ್ರಾಚೀನವಾದವು. ಕಾಯ, ವಾಚ ಮತ್ತು ಮನಸ್ಸಿನಿಂದ ಶ್ರೀ ಸ್ವಾಮಿಯಲ್ಲಿ ಬೇಡಿದ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂಬುದು ಶಾಸಗಳು ತಿಳಿಸುತ್ತವೆ ಎಂದರು.
    ಜಡೆ ಸಂಸ್ಥಾನ ಮಠದ ಕುಮಾರಕೆಂಪಿನ ಸಿದ್ಧವೃಷಭೇಂದ್ರ ಸ್ವಾಮೀಜಿ ಮಾತನಾಡಿ, ನಾಡಿನಲ್ಲಿ ಅನೇಕ ಶರಣರು, ವಚನಕಾರರು ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಅವರ ಮಾರ್ಗದಲ್ಲಿ ಮುನ್ನೆಡೆದಾಗ ಸತ್ಪ್ರಜೆಗಳಾಗಲು ಸಾಧ್ಯ. ದೇಶವು ಧಾರ್ಮಿಕ ಮತ್ತು ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವುದರಿಂದ ಜಗತ್ತಿನಲ್ಲಿಯೇ ಗುರುತಿಸಲ್ಪಡುತ್ತಿದೆ. ವೀರಭದ್ರ ಸ್ವಾಮಿಯನ್ನು ಶಿವನ ಅವತಾರವೆಂದು ಪೂಜಿಸಲಾಗುತ್ತಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಹಾಗೂ ಶರಣರ ವಚನಗಳನ್ನು ಆಲಿಸುವುದರಿಂದ ಮಾನಸಿಕವಾಗಿ ಶುದ್ಧರಾಗಲು ಸಾಧ್ಯ ಎಂದರು.
    ದೇವಸ್ಥಾನದ ಅರ್ಚಕ ಪುಟ್ಟಪ್ಪ ಹಿತ್ಲರ್ ಪೂಜಾ ಕಾರ್ಯಗಳ ನೇತೃತ್ವ ವಹಿಸಿದ್ದರು. ವೀರಭದ್ರೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಮಲಕಪ್ಪ ನಡಹಳ್ಳೇರ್, ಪ್ರಧಾನ ಕಾರ್ಯದರ್ಶಿ ಶಿವಪ್ಪ ಹಿತ್ಲರ್, ಹೇಮಪ್ಪ ಹಂಚಿನ್, ಮುದ್ದಪ್ಪ, ಗ್ರಾಮದ ಪ್ರಮುಖರಾದ ಗೆದ್ದಪ್ಪ, ವೀರಭದ್ರಪ್ಪ, ಚಂದ್ರಪ್ಪ, ವಿರುಪಾಕ್ಷಪ್ಪ, ಬಂಗಾರಪ್ಪ, ದೇವಪ್ಪ ಸೇರಿದಂತೆ ಗ್ರಾಮಸ್ಥರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts