ದೇವರಹಳ್ಳಿಯಲ್ಲಿ ಶ್ರೀ ವೀರಭದ್ರೇಶ್ವರಸ್ವಾಮಿ ಜಾತ್ರೆ

blank

ಅರಕಲಗೂಡು: ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ದಿನವಾದ ಶನಿವಾರ ಶ್ರೀ ವೀರಭದ್ರೇಶ್ವರಸ್ವಾಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.

ಶ್ರೀ ವೀರಭದ್ರೇಶ್ವರ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಮಾಡಲಾಯಿತು. ಉಪವಾಸ ವ್ರತ ಆಚರಿಸಿದ ಭಕ್ತ ಪ್ರಕಾಶ್ ಅವರಿಗೆ ದೇವಸ್ಥಾನದ ಆವರಣದಲ್ಲಿ ಸಾಂಪ್ರದಾಯಿಕವಾಗಿ ಕಂಕಣ ಕಟ್ಟಿ ತಲೆಮೇಲೆ ಪಾರ್ವತಮ್ಮ ಬಿಂದಿಗೆ ಹೊರಿಸಲಾಯಿತು. ಬಿಂದಿಗೆ ಉತ್ಸವದೊಂದಿಗೆ ದೇವರ ಉತ್ಸವ ಮೂರ್ತಿಯನ್ನು ಭಕ್ತರು ಅಲಂಕೃತ ಅಡ್ಡಮೇಲೆ ಹೊತ್ತು ನೃತ್ಯ ಪ್ರದರ್ಶಿಸಿ ಭಕ್ತಿ ಭಾವ ಪ್ರದರ್ಶಿಸಿದರು.

ಗ್ರಾಮದ ಬೀದಿಗಳಲ್ಲಿ ಸಾಗಿದ ಬಿಂದಿಗೆ ನೃತ್ಯ ಕಣ್ತುಂಬಿಕೊಂಡ ಭಕ್ತರು ಈಡುಗಾಯಿ ಒಡೆದು ಹಣ್ಣುಕಾಯಿ ಅರ್ಪಿಸಿ ಭಕ್ತಿ ಸಮರ್ಪಿಸಿದರು. ಜಾತ್ರೆ ಪ್ರಯುಕ್ತ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು.

Share This Article

ಮನೆಯಲ್ಲೇ ಮಾಡಿ ಟೇಸ್ಟಿ ಚಿಲ್ಲಿ ಚೀಸ್​​ ನೂಡಲ್ಸ್​​; ಇಲ್ಲಿದೆ ಸಿಂಪಲ್​ ವಿಧಾನ | Recipe

ಫ್ಯಾಮಿಲಿ ಜತೆ ಹೋಟೆಲ್​ಗೆ ಹೋದರೆ ಫ್ರೈಡ್​ರೈಸ್​​, ನೂಡಲ್ಸ್​​, ಗೋಬಿ ಹೀಗೆ ಚೈನೀಸ್​​​ ಫುಡ್ ಮೊದಲ ಆಯ್ಕೆಯಾಗಿರುತ್ತದೆ.…

ಈ ಕಾಯಿಲೆಯಿಂದ ಬಳಲುತ್ತಿರುವವರು ತಪ್ಪಾಗಿಯೂ ಬೀಟ್ರೂಟ್​ ಸೇವಿಸಬೇಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಬೀಟ್ರೂಟ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾದ ತರಕಾರಿಯಾಗಿದೆ. ಇದು ಜೀವಸತ್ವಗಳು, ಖನಿಜಾಂಶಗಳು ಮತ್ತು ಉತ್ಕರ್ಷಣ…

ಗರ್ಭನಿರೋಧಕ ಮಾತ್ರೆಗಳಿಂದ ಅಪಾಯ ತಪ್ಪಿದ್ದಲ್ಲ; ಇಲ್ಲಿದೆ ಸಂಶೋಧನೆಯಲ್ಲಿ ಬಹಿರಂಗವಾದ ಅಸಲಿ ಸಂಗತಿ |Health Tips

ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಂಡು ಅನಗತ್ಯ ಗರ್ಭಧಾರಣೆಯನ್ನು ತಡೆಗಟ್ಟುವುದು ಅತ್ಯಂತ ಜನಪ್ರಿಯ ವಿಧಾನವಾಗಿದೆ. ಪ್ರಪಂಚದಾದ್ಯಂತ ಅಂದಾಜು 250…