ಬೆಂಗಳೂರು: ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಶ್ರೀ ವೇಣುಗೋಪಾಲ ಕೃಷ್ಣ ಸ್ವಾಮಿಯ ಪ್ರಾಕಾರೋತ್ಸವ ಹಾಗೂ ಅಶ್ವವಾಹನೋತ್ಸವ ವಿಜೃಂಭಣೆಯಿಂದ ಜರುಗಿತು.
ಮುಂಜಾನೆ ದೇವರಿಗೆ ಅಭಿಷೇಕ ಹಾಗೂ ಪೂಜಾ ಕೈಂಕರ್ಯಗಳು ನಡೆಯಲಿವೆ. ಮಧ್ಯಾಹ್ನ ದೇವಾಲಯದ ಆವರಣದಲ್ಲಿ ಪ್ರಕಾರೋತ್ಸವ ನಡೆಸಲಾಯಿತು. ಸಂಜೆ ದೇವಾಲಯದ ಸುತ್ತಮುತ್ತಲ ಪ್ರಮುಖ ರಸ್ತೆಯಲ್ಲಿ ಅಶ್ವವಾಹನ ಉತ್ಸವ ಹಾಗೂ ರಾತ್ರಿ ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಿತು.