ಶ್ರೀಲ ಪ್ರಭುಪಾದರಿಗೆ ವಿಶ್ವಗುರು ಬಿರುದು; ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಪ್ರದಾನ

blank

ಪ್ರಯಾಗ್‌ರಾಜ್ : ಇಸ್ಕಾನ್ ಮತ್ತು ವಿಶ್ವಾದ್ಯಂತ ಹರೇ ಕೃಷ್ಣ ಅಭಿಯಾನದ ಸಂಸ್ಥಾಪಕ ಭಕ್ತಿವೇದಾಂತ ಸ್ವಾಮಿ ಶ್ರೀಲ ಪ್ರಭುಪಾದರಿಗೆ ಐತಿಹಾಸಿಕ ಮಹಾಕುಂಭಮೇಳದಲ್ಲಿ ಅಖಿಲ ಭಾರತ ಅಖಾಡ ಪರಿಷತ್ತು ‘ವಿಶ್ವಗುರು’ ಬಿರುದು ನೀಡಿ ಗೌರವಿಸಿದೆ.

ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸನಾತನ ಧರ್ಮವನ್ನು ಪರಿಚಯಿಸಿದ್ದಕ್ಕಾಗಿ ಹಾಗೂ ಭಾರತ ಮತ್ತು ವಿದೇಶಗಳಲ್ಲಿ ಇಸ್ಕಾನ್ ಸ್ಥಾಪನೆಯ ಮೂಲಕ ಕೃಷ್ಣಭಕ್ತಿಯನ್ನು ಪಸರಿಸಿದಕ್ಕಾಗಿ ಮಂಗಳವಾರ ನಿರಂಜನಿ ಅಖಾಡದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವಗುರು ಬಿರುದನ್ನು ನೀಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ನಿರಂಜನಿ ಅಖಾಡದ ಸ್ವಾಮಿ ಕೈಲಾಶಾನಂದ ಗಿರಿ ಮಹಾರಾಜರು, ಪವಿತ್ರ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭ ಉತ್ಸವದಲ್ಲಿ ಶ್ರೀಲ ಪ್ರಭುಪಾದರಂತಹ ಮಹಾನ್ ವ್ಯಕ್ತಿಗಳಿಗೆ 1968 ರ ಹೊತ್ತಿನ್ಲಲೇ ವಿಶ್ವಗುರು ಬಿರುದು ಸಿಗಬೇಕಿತ್ತು, ಆದರೆ ಇಂದು ಸಿಗುತ್ತಿರುವುದಕ್ಕೆ ನಾವುಗಳು ಸಾಕ್ಷಿಯಾಗಿದ್ದು ನಮ್ಮ ಪುಣ್ಯ ಎಂದರು.

ಶ್ರೀಲ ಪ್ರಭುಪಾದರಿಗೆ ವಿಶ್ವಗುರು ಬಿರುದು; ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಪ್ರದಾನ

ಭಗವದ್ಗೀತೆ ಬಗ್ಗೆ ಅದ್ಭುತವಾದ ಕೆಲಸವನ್ನು ಮಾಡಿರುವ ಶ್ರೀಲ ಪ್ರಭುಪಾದರಿಗೆ ವಿಶ್ವಗುರು ಬಿರುದು ನೀಡುವುದು ಸೂರ್ಯನಿಗೆ ದೀಪ ತೋರಿಸಿದಂತೆ ಎಂದು ಅಖಾಡ ಪರಿಷತ್ ಅಧ್ಯಕ್ಷರಾದ ರವೀಂದ್ರ ಪುರಿ ಜಿ ಮಹಾರಾಜ್ ಹೇಳಿದರು.

ಶ್ರೀಲ ಪ್ರಭುಪಾದರಿಗೆ ವಿಶ್ವಗುರು ಎಂಬ ಬಿರುದನ್ನು ನೀಡಿ ಗೌರವಿಸಿದ್ದಕ್ಕಾಗಿ ಅಖಿಲ ಭಾರತ ಅಖಾಡ ಪರಿಷತ್ತಿಗೆ ಇಸ್ಕಾನ್ ಬೆಂಗಳೂರಿನ ಮುಖ್ಯಸ್ಥ ಮಧು ಪಂಡಿತ್ ದಾಸರು ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಆಚಾರ್ಯ ಮಹಾಮಂಡಲೇಶ್ವರ ಅವಧೂತ್ ಅರುಣ್ ಗಿರಿಜಿ, ವಿವಿಧ ಅಖಾಡಗಳ ಮಹಾಮಂಡಲೇಶ್ವರರು, ಕಾರ್ಯದರ್ಶಿಗಳು, ಮಹಂತರು, ಇಸ್ಕಾನ್ ಬೆಂಗಳೂರಿನ ಉಪಾಧ್ಯಕ್ಷ ಶ್ರೀಚಂಚಲಪತಿ ದಾಸರು ಮತ್ತು ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಬೆಂಗ್ಳೂರಿಗೆ ಬಿಸಿಲಾತಂಕ: 42 ಡಿ.ಸೆ.ದಾಟುವ ನಿರೀಕ್ಷೆ

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…