ಕೊಲಂಬೋ: ಭಾರತದ ಸ್ಟಾರ್ ವೇಗಿಗಳ ದಾಳಿಗೆ ನಲುಗಿದ ಶ್ರೀಲಂಕಾ ಕ್ರಿಕೆಟ್ ತಂಡವು ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ 50ರನ್ಗಳಿಗೆ ಆಲೌಟ್ ಆಗಿದೆ.
ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡಕ್ಕೆ ಭಾರತದ ವೇಗಿಗಳಾದ ಕಡಿವಾನ ಹೇರಿದ್ದಾರೆ.
ಒಂದೇ ಓವರ್ನಲ್ಲಿ ನಾಲ್ಕು ವಿಕೆಟ್ ಪಡೆಯುವ ಮೂಲಕ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ ವೇಗವಾಗಿ 50ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಭಾರತದ ಪರ ಮೊಹಮ್ಮದ್ ಸಿರಾಜ್ (7-1-21-6), ಹಾರ್ದಿಕ್ ಪಾಂಡ್ಯ (2.2-0-3-3), ಜಸ್ಪ್ರೀತ್ ಬುಮ್ರಾ (5-1-23-1) ರನ್ ನೀಡಿ ವಿಕೆಟ್ ಪಡೆದಿದ್ಧಾರೆ. ಭಾರತ ಗೆಲ್ಲಲು 51ರನ್ಗಳ ಗುರಿ ನೀಡಲಾಗಿದೆ.