More

    ಎಲ್ಲೆಂದರಲ್ಲಿ ಪಿಪಿಇ ಕಿಟ್​ ಬಿಸಾಡಿದ್ರೆ ಕಠಿಣ ಕ್ರಮ; ಶ್ರೀರಾಮುಲು

    ಬೆಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬಳಸುವ ಪಿಪಿಇ ಕಿಟ್​ಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದೆ ಎಲ್ಲೆಂದರಲ್ಲಿ ಬಿಸಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಎಚ್ಚರಿಸಿದ್ದಾರೆ.

    ಇತ್ತೀಚಿಗೆ ಬಳಸಿದ ಪಿಪಿಇ ಕಿಟ್​ಗಳು ರಸ್ತೆಬದಿ, ಸ್ಮಶಾನದಲ್ಲಿ ಕಂಡು ಬಂದಿತ್ತು. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಈ ಕಿಟ್​ಗಳು ಎಲ್ಲೆಂದರಲ್ಲಿ ಕಾಣಸಿಗುತ್ತಿರುವುದು ಜನರಲ್ಲಿ ಮತ್ತಷ್ಟು ಭೀತಿ ಹುಟ್ಟಿಸಿದೆ. ಬೆಂಗಳೂರಿನ ಜೆ.ಸಿ.ನಗರದಲ್ಲಿ ಕರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನೆರವೇರಿಸಿದ ಸಿಬ್ಬಂದಿ ಪಿಪಿಇ ಕಿಟ್ ಅನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದರಿಂದ ಸ್ಥಳೀಯರು ಆತಂಕಗೊಂಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡಿ ಸೋಂಕಿತರ ಅಂತ್ಯ ಸಂಸ್ಕಾರದ ವೇಳೆ ಸಿಬ್ಬಂದಿಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿತ್ತು. ಇದನ್ನೂ ಓದಿರಿ ಸ್ಮಶಾನದಲ್ಲೇ ಎಸೆದರು ಪಿಪಿಇ ಕಿಟ್​, ಸ್ಥಳೀಯರಲ್ಲಿ ಆತಂಕ

    ಎಚ್ಚೆತ್ತ ಆರೋಗ್ಯ ಸಚಿವ ಶ್ರೀರಾಮುಲು, ಪಿಪಿಇ ಕಿಟ್​ಅನ್ನು ವೈಜ್ಞಾನಿಕವಾಗಿ ವಿಲೇ ಮಾಡದವರ ವಿರುದ್ಧ ಮುಲಾಜಿಲ್ಲದೇ ಅತ್ಯಂತ ಕಠಿಣ ಕ್ರಮ ಜರುಗಿಸಲಾಗುವುದು. ಯಾರೋ ಕೆಲವರ ನಿರ್ಲಕ್ಷ್ಯ ಜನಸಾಮಾನ್ಯರ ಪ್ರಾಣಕ್ಕೆ ಕಂಟಕ ತರಬಾರದು. ಸಂಬಂಧಿಸಿದ ಅಧಿಕಾರಿಗಳೇ ಇದಕ್ಕೆ ನೇರ ಹೊಣೆಗಾರರು ಎಂದು ಟ್ವೀಟ್​ ಮೂಲಕ ಎಚ್ಚರಿಸಿದ್ದಾರೆ.

    ಇನ್ನಾದರೂ ಕರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ನಿಯಮದಂತೆಯೇ ಮಾಡಬೇಕು. ಈ ವೇಳೆ ಸ್ಥಳೀಯರಿಗೆ ತೊಂದರೆ ಆಗದಂತೆ, ಆತಂಕ ತಂದೊಡ್ಡುವ ಘಟನೆ ಸಂಭವಿಸದಂತೆ ಸಿಬ್ಬಂದಿ ಜಾಗ್ರತೆ ವಹಿಸಬೇಕಿದೆ.

    ಸಪ್ತಪದಿ ತುಳಿದ ಐದೇ ದಿನಕ್ಕೆ ಮದುಮಗ ಸಾವು, 20 ಜನರಿಗೆ ಕೋವಿಡ್​ ಸೋಂಕು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts