More

    ಬಿಜೆಪಿ ಬೆಂಬಲಿಸಿ ಅಭಿವೃದ್ಧಿಗೆ ಸಹಕರಿಸಿ: ಮುಖಂಡ ಇಂಡುವಾಳು ಎಸ್.ಸಚ್ಚಿದಾನಂದ ಮನವಿ

    ಶ್ರೀರಂಗಪಟ್ಟಣ: ನಾನು ಯಾವುದೇ ದ್ವೇಷ ಹಾಗೂ ಸ್ವಾರ್ಥ ರಾಜಕಾರಣ ಮಾಡಲು ರಾಜಕೀಯಕ್ಕೆ ಬಂದಿಲ್ಲ. ನಿಮ್ಮ ಮನೆ ಮಗನಾಗಿ ಈ ಕ್ಷೇತ್ರದ ಸೇವೆ ಮಾಡಲು ಅವಕಾಶ ನೀಡಿ ಎಂದು ಬಿಜೆಪಿ ಮುಖಂಡ ಎಸ್.ಸಚ್ಚಿದಾನಂದ ಮನವಿ ಮಾಡಿದರು.
    ತಾಲೂಕಿನ ಕೊಡಿಯಾಲ ಗ್ರಾಮದ ಶ್ರೀ ಸಿದ್ದೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಬಿಜೆಪಿ ಪಕ್ಷದ ಅರಕೆರೆ ಮಹಾಶಕ್ತಿ ಕೇಂದ್ರ ಕಾರ್ಯಕರ್ತರ ಸಭೆ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಜನರು ಭಾವನಾತ್ಮಕ ಜೀವಿಗಳು. ನಿಮ್ಮಿಂದ ಇಷ್ಟು ವರ್ಷಗಳ ಕಾಲ ಆಡಳಿತ ಪಡೆದು ಅಧಿಕಾರ ಅನುಭವಿಸಿದ ಎರಡು ಕುಟುಂಬಗಳು ಕೇವಲ ಕುಟುಂಬ ರಾಜಕಾರಣ ಮಾಡಿದ್ದಾರೆಯೇ ವಿನಹ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಅರಕೆರೆ ಹೊರತುಪಡಿಸಿ ಅದೇ ಹೋಬಳಿಯ ಇತರ ಗ್ರಾಮಗಳು ಹಾಗೂ ಕ್ಷೇತ್ರದ ಉಳಿದ ಹೋಬಳಿ ಕೇಂದ್ರಗಳು ಅಭಿವೃದ್ಧಿಯಿಂದ ಹಿಂದುಳಿದಿವೆ. ರಾಜ್ಯದಲ್ಲಿ ಬಿಜೆಪಿ ಪಕ್ಷ ಎಂದಿಗೂ ತಾರತಮ್ಯದ ಆಡಳಿತ ನೀಡಿಲ್ಲ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ ಬೆಂಬಲಿಸಬೇಕು ಎಂದು ಕೋರಿದರು.
    ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ ಮಾತನಾಡಿ, ನೆರೆಯ ಪಾಕಿಸ್ತಾನ ಹಾಗೂ ಶ್ರೀಲಂಕಾ ದೇಶಗಳಲ್ಲಿ ಭ್ರಷ್ಟ ಆಡಳಿತದಿಂದ ಅರಾಜಕತೆ ಸೃಷ್ಟಿಯಾಗಿದೆ. ಆದರೆ ನಮ್ಮಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಿಂದ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದರು.
    ಅರಕೆರೆ, ಚಿಂದೇಗೌಡನಕೊಪ್ಪಲು, ತಡಗವಾಡಿ, ಕೊಡಿಯಾಲ ಗ್ರಾಮದ ನೂರಾರು ಜನರು ಬಿಜೆಪಿ ಸೇರ್ಪಡೆಗೊಂಡರು. ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯ ಡಾ.ಸಿದ್ದರಾಮಯ್ಯ, ಜಿಲ್ಲಾ ಉಪಾಧ್ಯಕ್ಷ ಟಿ.ಶ್ರೀಧರ್, ಮಂಡಲ ಅಧ್ಯಕ್ಷ ಪೀಹಳ್ಳಿ ರಮೇಶ್, ಮುಖಂಡರಾದ ತಡಗವಾಡಿ ಬಾಪು, ಧನಂಜಯ್ಯ, ತಾಲೂಕು ಕಾರ್ಯದರ್ಶಿ ಸಂತೋಷ್, ನಂದೀಶ್, ಅಜಿತ್, ಕಿರಣ್, ಜಯಂತ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts