More

    ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಕ್ಷಣಗಣನೆ; ಇಂದಿನಿಂದ ಸಾಂಸ್ಕೃತಿಕ ಲೋಕ ಅನಾವರಣ

    ಮಂಡ್ಯ: ಪಾರಂಪರಿಕ ನಗರಿ ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಕ್ಷಣ ಗಣನೆ ಆರಂಭವಾಗಿದೆ. ಮಧ್ಯಾಹ್ನ 2.30ರಿಂದ 3.15ರವರಿಗೆ ಸಲ್ಲುವ ಮಕರ ಲಗ್ನದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ. ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್​​​​ ದಸರಾಗೆ ಚಾಲನೆ ನೀಡಲಿದ್ದಾರೆ.

    ಶ್ರೀರಂಗಪಟ್ಟಣದ ಕಿರಂಗೂರಿನ ಬನ್ನಿಮಂಟಪ ಬಳಿ ಪೂಜಾ ಕೈಂಕರ್ಯ ನೆರವೇರಲಿದ್ದು, ಬನ್ನಿ ಪೂಜೆ ಹಾಗೂ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಾಗುವುದು.

    ಶ್ರೀರಂಗಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಂಬೂಸವಾರಿ ಸಾಗಲಿದ್ದು, ಮಹೇಂದ್ರ ಆನೆ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದ್ದಾನೆ.

    ಕೂಂಕಿ ಆನೆಗಳಾಗಿ ವಿಜಯ, ವರಲಕ್ಷ್ಮಿ ಆನೆಗಳು ಸಾಥ್ ನೀಡಲಿವೆ. ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಂಬೂಸಾರಿ ಮೆರವಣಿಗೆ ಸಾಗಲಿದೆ. ಬನ್ನಿ ಮಂಟಪದಿಂದ ಆರಂಭವಾಗಿ ಶ್ರೀರಂಗನಾಥ ದೇವಾಲಯದವರೆಗೆ ಮೆರವಣಿಗೆ ಸಾಗಲಿದೆ.

    ಜಂಬೂಸವಾರಿ ವೇಳೆ ವಿವಿಧ ಕಲಾತಂಡಗಳ ಮೆರಗು ನೀಲಿವೆ. ವಿವಿಧ ಕಲಾತಂಡಗಳಾದ ಬ್ಯಾಂಡ್, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ದ ಚಿತ್ರಗಳ ಮೆರವಣಿಗೆ ಗಮನಸೆಳೆಯಲಿವೆ.

    ಸಚಿವ ಚಲುವರಾಯಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿ ಹಲವರು ಭಾಗಿಯಾಗಲಿದ್ದಾರೆ. ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಇಂದಿನಿಂದ 3 ದಿನಗಳ ಕಾಲ ಶ್ರೀರಂಗನಾಥಸ್ವಾಮಿ ದೇವಾಲಯ ಬಳಿಯ ವೇದಿಕೆಯಲ್ಲಿ ಕಾರ್ಯಕ್ರಮವಿರಲಿದೆ.

    ದ್ವಿತೀಯಂ ಬ್ರಹ್ಮಚಾರಿಣಿ: ನವರಾತ್ರಿ ಎರಡನೇ ದಿನ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts