More

    ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರುದ್ಧ ಕಾಂಗ್ರೆಸ್​ ನಾಯಕರಿಂದ ಅಪಪ್ರಚಾರ: ಪ್ರಧಾನಿ ಮೋದಿ ವಾಗ್ದಾಳಿ

    ತುಮಕೂರು: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಕಾಂಗ್ರೆಸ್​ ಅಪ ಪ್ರಚಾರ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

    ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಕಾಯ್ದೆಗೆ ತಿದ್ದುಪಡಿ ತಂದು ನೆರೆ ರಾಷ್ಟ್ರಗಳಿಂದ ದೌರ್ಜನ್ಯಕ್ಕೆ ತುತ್ತಾಗಿ ಬರುವವರಿಗೆ ಕಾಯ್ದೆಯಲ್ಲಿ ರಕ್ಷಣೆ ದೊರೆಯುತ್ತದೆ. ಕೇವಲ ಹಿಂದುಗಳಿಗೆ ಮಾತ್ರವಲ್ಲ ಮುಸಲ್ಮಾನರಿಗೂ ಈ ಕಾಯ್ದೆ ರಕ್ಷಣೆ ಒದಗಿಸುತ್ತದೆ. ಆದರೆ ಕಾಂಗ್ರೆಸ್​ ರಾಷ್ಟ್ರ ವ್ಯಾಪಿ ಈ ಕಾಯ್ದೆ ಬಗ್ಗೆ ಅಪಪ್ರಚಾರ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
    ಪಾಕ್​ನಿಂದ ವಲಸೆ ಬಂದ ಯಾರನ್ನು ಕೈಬಿಡುವುದಿಲ್ಲ. ಎಲ್ಲರಿಗೂ ಭಾರತದಲ್ಲಿ ಆಶ್ರಯ ನೀಡಲಾಗುತ್ತದೆ. ಇದನ್ನು ತಿಳಿಯದೇ ಸುಳ್ಳು ಹೇಳಿ ಜನರನ್ನು ಕಾಂಗ್ರೆಸ್​ ದಾರಿ ತಪ್ಪಿಸುತ್ತಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts