ತುಮಕೂರು: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಕಾಂಗ್ರೆಸ್ ಅಪ ಪ್ರಚಾರ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಯ್ದೆಗೆ ತಿದ್ದುಪಡಿ ತಂದು ನೆರೆ ರಾಷ್ಟ್ರಗಳಿಂದ ದೌರ್ಜನ್ಯಕ್ಕೆ ತುತ್ತಾಗಿ ಬರುವವರಿಗೆ ಕಾಯ್ದೆಯಲ್ಲಿ ರಕ್ಷಣೆ ದೊರೆಯುತ್ತದೆ. ಕೇವಲ ಹಿಂದುಗಳಿಗೆ ಮಾತ್ರವಲ್ಲ ಮುಸಲ್ಮಾನರಿಗೂ ಈ ಕಾಯ್ದೆ ರಕ್ಷಣೆ ಒದಗಿಸುತ್ತದೆ. ಆದರೆ ಕಾಂಗ್ರೆಸ್ ರಾಷ್ಟ್ರ ವ್ಯಾಪಿ ಈ ಕಾಯ್ದೆ ಬಗ್ಗೆ ಅಪಪ್ರಚಾರ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಪಾಕ್ನಿಂದ ವಲಸೆ ಬಂದ ಯಾರನ್ನು ಕೈಬಿಡುವುದಿಲ್ಲ. ಎಲ್ಲರಿಗೂ ಭಾರತದಲ್ಲಿ ಆಶ್ರಯ ನೀಡಲಾಗುತ್ತದೆ. ಇದನ್ನು ತಿಳಿಯದೇ ಸುಳ್ಳು ಹೇಳಿ ಜನರನ್ನು ಕಾಂಗ್ರೆಸ್ ದಾರಿ ತಪ್ಪಿಸುತ್ತಿದೆ ಎಂದು ಹೇಳಿದರು.