ಬೆಂಗಳೂರು: ಮುಂದೂಡಿರುವ ಎಸ್ಎಸ್ಎಲ್ಸಿ ಪರೀಕ್ಷೆ ದಿನವನ್ನು ಲಾಕ್ಡೌನ್ ಅವಧಿ ಮುಗಿದ ನಂತರ ನಿರ್ಧಾರ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ತಿಳಿಸಿದ್ದಾರೆ.
ಪರೀಕ್ಷೆ ದಿನಾಂಕ ನಿಗದಿ ಹಾಗೂ ವಿದ್ಯಾರ್ಥಿಗಳಿಗೆ ಧೈರ್ಯದ ಮಾತು ಹೇಳಿರುವ ವಿಡಿಯೋ ಅನ್ನು ಅವರು ಸಾಮಾಜಿ ಜಾಲ ತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.
ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಬೇಕಿತ್ತು. ರಾಜ್ಯದ 8.5 ಲಕ್ಷ ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದರು. ಕರೊನಾ ವೈರಸ್ ಭೀತಿಯಿಂದ ಮುಂದೂಡಲಾಯಿತು. ರಾಷ್ಟ್ರದಲ್ಲಿ ಘೋಷಿಸಿರುವ ಲಾಕ್ಡೌನ್ ಅವಧಿ ಮುಗಿದ ನಂತರ ಪರೀಕ್ಷೆ ದಿನಾಂಕ ನಿಗದಿಪಡಿಸಲಾಗುವುದು. ಅಲ್ಲಿವರೆಗೆ ವಿದ್ಯಾರ್ಥಿಗಳು ಉತ್ಸಾಹ ಕಳೆದುಕೊಳ್ಳದೆ ಮನೆಯಲ್ಲೇ ಇದ್ದು ಅಭ್ಯಾಸ ಮಾಡಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.
ಜೀವನದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವುದೇ ಮುಖ್ಯ ಅಲ್ಲ. ಅದಕ್ಕಿಂತ ಪ್ರಮುಖವಾದ ಪರೀಕ್ಷೆಗಳನ್ನು ಎದುರಿಸಬೇಕಾಗಿದೆ. ಅದರಲ್ಲೂ ಕರೊನಾ ವೈರಸ್ ಎದುರಿಸುವುದು ದೊಡ್ಡ ಯುದ್ಧವಾಗಿದೆ. ಹೀಗಾಗಿ ಪರೀಕ್ಷೆ ಬರೆಯಲಿಲ್ಲ ಎಂಬ ಭೀತಿ ಬಿಟ್ಟು, ಅಪ್ಪ-ಅಮ್ಮನ ಜತೆ ಮನೆಯಲ್ಲೇ ಇದ್ದು ದಿನಕ್ಕೆ ಒಂದು ವಿಷಯದಂತೆ ಎಲ್ಲ ವಿಷಯಗಳನ್ನು ಅಭ್ಯಾಸ ಮಾಡಿ ಎಂದು ಮನವಿ ಮಾಡಿದ್ದಾರೆ.
ಸಮಾಜ ಹಾಗೂ ಗಣಿತ ವಿಷಯಗಳು ತುಂಬ ಕಷ್ಟ ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ಹೀಗಾಗಿ ಈ ವಿಷಯಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ನೀಡಿರುವ ಎಲ್ಲ ಸಾಮಗ್ರಿಗಳನ್ನು ಕೂಡಿಸಿಕೊಂಡು ಹೆಚ್ಚು ಸಮಯ ಇರುವುದರಿಂದ ಅಭ್ಯಾಸ ಮಾಡಿ. ಮನೆಯಲ್ಲೇ ಇರಿ ಹೊರಗೆ ಬರಬೇಡಿ. ಕರೊನಾ ವಿರುದ್ಧ ಯುದ್ಧ ಮಾಡಿ ಗೆಲ್ಲಿ. ನಂತರ ಎಸ್ಎಸ್ಎಲ್ಸಿ ಪರೀಕ್ಷೆ ಗೆಲುವು ಸುಲಭವಾಗುತ್ತದೆ ಎಂದು ಅವರು ವಿಡಿಯೋದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಕರೊನಾ ವೈರಸ್ ಸೋಂಕು ತಡೆಯಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಮಣ್ಣು ಸುರಿದ ಗ್ರಾಮಸ್ಥರು