ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಯಾವುದೇ ಕಾರಣಕ್ಕೂ ರದ್ದಾಗಲ್ಲ, ಈ ಬಗ್ಗೆ ಚಿಂತೆ ಮಾಡದೇ ಚೆನ್ನಾಗಿ ಓದ್ಕೊಳಿ…..
ಇದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ಕುಮಾರ್ ವಿದ್ಯಾರ್ಥಿಗಳಿಲ್ಲಿ ಮಾಡಿರುವ ಮನವಿ.
ರಾಜ್ಯದಲ್ಲಿ ಜೂ.25ರಿಂದ ಜುಲೈ ನಾಲ್ಕರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಿಗದಿಯಾಗಿದ್ದು, ಈಗಾಗಲೇ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂದರ್ಭದಲ್ಲಿ ಕೆಲ ಸಂಘಟನೆಗಳು ಹಾಗೂ ಚಿಂತಕರು ಪರೀಕ್ಷೆಯನ್ನು ಮುಂದೂಡುವಂತೆ ಮನವಿ ಮಾಡಿವೆ. ಆದ್ದರಿಂದ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿದೆ. ಹೀಗಾಗಿ ಸುರೇಶ್ಕುಮಾರ್ ಈ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ; ಗುಡ್ ಟಚ್.. ಬ್ಯಾಡ್ ಟಚ್ ಮುಗೀತು…, ಶಾಲೆಗಳಲ್ಲಿನ್ನು ‘ನೋ ಟಚ್’ ಮಂತ್ರ
ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಮಕ್ಕಳಿಗೂ ಹಬ್ಬುತ್ತದೆ ಎಂಬ ಆತಂಕ ವ್ಯಕ್ತಪಡಿಸಲಾಗಿದೆ. ಆದರೆ, ಕೇರಳದಲ್ಲಿ ಇಂಥ ಭಯದ ನಡುವೆಯೇ ಪರೀಕ್ಷೆಗಳನ್ನು ನಡೆಸಲಾಗಿದೆ. ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲಾಗುತ್ತದೆ ಎಂದು ಸುರೇಶ್ಕುಮಾರ್ ಭರವಸೆ ನೀಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಗೂ ಮುನ್ನ ಜೂ.18ರಂದು ಬಾಕಿ ಉಳೀದಿರುವ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ಕೂಡ ನಿಗದಿಯಂತೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
https://www.vijayavani.net/corona-effect-hundreds-of-pre-schools-for-sale-in-bangalore/