ಎರಡೆರಡು ಬಾರಿ ಬರೆಯಿರಿ ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆ; ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿದೆ ಅವಕಾಶ

blank

ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಸಕ್ತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ತರಲಿದೆ. 34 ವರ್ಷಗಳ ಬಳಿಕ ಜಾರಿಗೊಳಿಸಲಾಗುತ್ತಿರುವ ಶಿಕ್ಷಣ ನೀತಿಯ ಪರಿಷ್ಕರಣೆ ಹಲವು ಕಾರಣಗಳಿಂದಾಗಿ ಮಹತ್ವ ಪಡೆದಿದೆ.

ನೂತನ ಶಿಕ್ಷಣ ನೀತಿಯಲ್ಲಿ ಪರೀಕ್ಷೆಗಳಿಗೆ ನೀಡಲಾಗಿರುವ ಪ್ರಾಧಾನ್ಯತೆಯನ್ನು ಕಡಿಮೆ ಮಾಡಲಾಗಿದೆ. ಸಮಗ್ರ ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಒತ್ತು ನೀಡಲಾಗಿದೆ. ಈ ಕಾರಣಕ್ಕೆ ಬೋರ್ಡ್​ ಅಥವಾ ಮಂಡಳಿ ಪರೀಕ್ಷೆಗಳನ್ನು ಪಾಸ್​ ಮಾಡಲು ವಿದ್ಯಾರ್ಥಿಗಳಿಗೆ ವರ್ಷಕ್ಕೆರಡು ಅವಕಾಶ ಸಿಗಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್​ ಪೋಖ್ರಿಯಾಲ್​ ತಿಳಿಸಿದ್ದಾರೆ.

ಇದನ್ನೂ ಓದಿ; ರಾಷ್ಟ್ರೀಯ ಶಿಕ್ಷಣ ನೀತಿಗೆ ಕೆರಳಿದ ತಮಿಳುನಾಡು; ಬಿಜೆಪಿ ಅಂಗಪಕ್ಷ ವಿರೋಧಿಸುತ್ತಿರುವುದು ಏನನ್ನು? 

10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ಸುಲಭವಾಗಿಸಲಾಗಿದೆ. ಈ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು ಎರಡು ಬಾರಿ ಹಾಜರಾಗಬಹುದು. ಕಳೆದ ಬಾರಿಯ ಕರಡು ನೀತಿಯಲ್ಲೂ ಈ ಅಂಶವನ್ನು ಉಲ್ಲೇಖಿಸಲಾಗಿತ್ತು. ಅಂತಿಮ ನೀತಿಯಲ್ಲೂ ಇದನ್ನು ಉಳಿಸಿಕೊಳ್ಳಲಾಗಿದೆ.

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸ್ಪರ್ಧಾತ್ಮಕತೆಯನ್ನು ಓರೆಗೆ ಹಚ್ಚಲಾಗುತ್ತದೆಯೇ ಹೊರತು, ಅವರ ಸ್ಮರಣ ಶಕ್ತಿಯನ್ನಲ್ಲ. ಏಕೆಂದರೆ, ವಿದ್ಯಾರ್ಥಿಗಳು ಕೋಚಿಂಗ್​ ಸೆಂಟರ್​ನಲ್ಲಿ ಕಲಿತದ್ದನ್ನು ಅಥವಾ ಊರು ಹೊಡೆದಿದ್ದನ್ನು ಅವಲಂಬಿಸದೆ ನೈಜ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂಬುದು ಇದರ ಉದ್ದೇಶವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ; ಎಂಫಿಲ್​ ರದ್ದು, ಪದವಿ ಶಿಕ್ಷಣ ಸ್ವರೂಪದಲ್ಲಿ ಬದಲಾವಣೆ; ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಏನೇನಿದೆ? 

ಶೈಕ್ಷಣಿಕ ವರ್ಷದ ಯಾವುದೇ ಸಮಯದಲ್ಲಿ ಎಲ್ಲ ವಿದ್ಯಾರ್ಥಿಗಳು ಎರಡು ಬಾರಿ ಪರೀಕ್ಷೆಗೆ ಹಾಜರಾಗಬಹುದು. ಒಂದು ಮುಖ್ಯ ಪರೀಕ್ಷೆ ಹಾಗೂ ಇನ್ನೊಂದು ಅದನ್ನು ಉತ್ತಮಪಡಿಸಿಕೊಳ್ಳುವ ಅವಕಾಶವಾಗಿರಲಿದೆ. ಇದು ವಾರ್ಷಿಕ ಪರೀಕ್ಷೆಯ ಭೀತಿಯನ್ನು ಹೋಗಲಾಡಿಸಲಿದೆ.

ಮುಂದಿನ ದಿನಗಳಲ್ಲಿ ಸೆಮಿಸ್ಟರ್​ ಮಾದರಿಯಲ್ಲಿ ಬೋರ್ಡ್​ ಪರೀಕ್ಷೆ, ಸಬ್ಜೆಕ್ಟಿವ್​ ಹಾಗೂ ಆಬ್ಜೆಕ್ಟಿವ್​ ಪ್ರಶ್ನೆಗಳಿಗೆ ಪ್ರತ್ಯೇಕ ಪರೀಕ್ಷೆ ನಡೆಸುವ ಉದ್ದೇಶವನ್ನು ಹೊಂದಲಾಗಿದೆ.

15ನೇ ವರ್ಷಕ್ಕೆ ಮದುವೆ, ಎರಡೂವರೆ ವರ್ಷದ ಮಗುವಿನ ತಾಯಿಯೀಗ ಪಿಯು ಪರೀಕ್ಷೆಯಲ್ಲಿ ಅಗ್ರ ಸಾಧಕಿ

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…