More

    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಬ್ರಹ್ಮಣ್ಯ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

    ಮಂಗಳೂರು: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ 6 ವಿದ್ಯಾರ್ಥಿಗಳು 625 ಅಂಕ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ. ಈ ಪೈಕಿ ಕಡಬ ತಾಲೂಕು ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ ಅನುಷ್ ಎ.ಎಲ್ 625 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ ಪ್ರಥಮಸ್ಥಾನ ಗಳಿಸಿದ್ದಾರೆ. ಅನುಷ್ ಬಳ್ಪ ಗ್ರಾಮದ ಎಣ್ಣೆಮಜಲು ಲೋಕೇಶ್ ಮತ್ತು ಉಷಾ ದಂಪತಿ ಪುತ್ರ. ಅಂತೆಯೇ 11 ಮಂದಿ 624 ಅಂಕ ಪಡೆದಿದ್ದು, ಈ ಪೈಕಿ ಕರಾವಳಿಯ ಮೂವರಿದ್ದಾರೆ.

    624 ಅಂಕ ಪಡೆದ ವಿದ್ಯಾರ್ಥಿಗಳ ವಿವರ ಹೀಗಿದೆ: ಬೈಂದೂರು ಕಿರಿಮಂಜೇಶ್ವರ ಸಾಂದೀಪನಿ ಆಂಗ್ಲಮಾಧ್ಯಮ ಶಾಲೆಯ ಸುರಭಿ ಎಸ್. ಶೆಟ್ಟಿ, ಮಂಗಳೂರು ಡೊಂಗರಕೇರಿ ಕೆನರಾ ಹೈಸ್ಕೂಲ್‌ನ ನಿಧಿ ರಾವ್, ಬಂಟ್ವಾಳ ಅಳಿಕೆ ಸತ್ಯಸಾಯಿ ಲೋಕಸೇವಾ ಹೈಸ್ಕೂಲ್ ಸುಮುಖ ಶೆಟ್ಟಿ 624 ಅಂಕ ಪಡೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts