ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಮತ್ತು ಸುಗಮವಾಗಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಆಯೋಜಿಸಲು ರಾಜ್ಯ ಶಿಕ್ಷಣಾ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.
ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜೂ.25ರಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೂ ಒಂದು ವಾರ ಮೊದಲು ಪರೀಕ್ಷಾರ್ಥಿಗಳ ಎಲ್ಲರ ಆರೋಗ್ಯ ತಪಾಸಣೆ ಮಾಡಲು ನಿರ್ಧರಿಸಿದೆ.
ಆರೋಗ್ಯ ಇಲಾಖೆಯ ಸಹಕಾರದಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಥಳೀಯ ಆರೋಗ್ಯ ಅಧಿಕಾರಿಗಳು ಮಕ್ಕಳು ಇರುವಲ್ಲಿಯೇ ಹೋಗಿ ಆರೋಗ್ಯ ತಪಾಸಣೆ ಮಾಡಲಿದ್ದಾರೆ. ಈ ರೀತಿ ಮಾಡುವುದರಿಂದ, ತಮ್ಮ ಸುರಕ್ಷತೆಗಾಗಿ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಮಕ್ಕಳಲ್ಲಿ ಆತಂಕ ದೂರಾಗಿ ಆತ್ಮವಿಶ್ವಾಸ ಮೂಡುತ್ತದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಹೇಳಿದ್ದಾರೆ.
ಲಾಕ್ಡೌನ್ ದಾಟಿ ಬಂದ್ಳು… ಕುದುರೆ ಏರಿ ಬಂದ್ಳು… ಚೆಲುವೆ ಮಹಾರಾಣಿ….