blank

ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಸಿದ್ದರಾಮಯ್ಯನವರ ಅಸಹಾಯಕತೆ ಕೆಲವರನ್ನು ಪಕ್ಷ ಬಿಡಲು ಪ್ರೋತ್ಸಾಹಿಸಿತ್ತು: ಎಸ್​​.ಟಿ ಸೋಮಶೇಖರ್

blank

ಬೆಂಗಳೂರು: ಇಂದು ಬೆಳಗ್ಗೆಯಷ್ಟೇ ಡಾ. ಸುಧಾಕರ್, ಸಿದ್ದರಾಮಯ್ಯನವರ ಪರೋಕ್ಷ ಅಥವಾ ಅಪರೋಕ್ಷ ಪಾತ್ರದ ಕಾರಣದಿಂದಲೇ ಕೆಲವರು ರಾಜೀನಾಮೆ ನೀಡಿದ್ದರು ಎಂದು ಟ್ವೀಟ್​ ಮೂಲಕ ಹೇಳಿದ್ದರು. ಇದೀಗ ಅದೇ ಧಾಟಿಯ ಟ್ವೀಟ್​ ಒಂದನ್ನು ಎಸ್​.ಟಿ ಸೋಮಶೇಖರ್​ ಪೋಸ್ಟ್​ ಮಾಡಿದ್ದಾರೆ.

blank

ತಮ್ಮ ಟ್ವೀಟ್​ನಲ್ಲಿ ಎಸ್.ಟಿ ಸೋಮಶೇಖರ್​, “ಮಾನ್ಯ ಸಿದ್ದರಾಮಯ್ಯನವರು ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಶಾಸಕರಲ್ಲಿ ತೋಡಿಕೊಳ್ಳುತ್ತಿದ್ದ ಅಸಹಾಯಕತೆ, ಕೊಡುತ್ತಿದ್ದ ಆಶ್ವಾಸನೆ ಇದೇ ಎಂಬುದು ಸತ್ಯ.

ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ!: ಸ್ಫೋಟಕ ಹೇಳಿಕೆ ನೀಡಿದ ಸುಧಾಕರ್

ಸಿದ್ದರಾಮಯ್ಯನವರ ಅಸಹಾಯಕತೆ ಸಹ ನಾವು ಪಕ್ಷ ಬಿಡಲು ಒಂದು ಪ್ರೇರಣೆಯಾಯಿತು ಎಂದರೆ ಅದು ತಪ್ಪಾಗಲಾರದು” ಎಂದು ಬರೆದುಕೊಂಡಿದ್ದಾರೆ.

ಇದೀಗ ಡಿಕೆಶಿ ಹಾಗೂ ಸಿದ್ದರಾಮಯ್ಯ ಸಿಎಂ ಗಾದಿಗಾಗಿ ಪಟ್ಟು ಬಿಡದೇ ಸ್ಪರ್ಧಿಸುತ್ತಿರುವ ಸಂದರ್ಭದಲ್ಲಿ ಈ ರೀತಿಯ ಟ್ವೀಟ್​ಗಳನ್ನು ಬಿಜೆಪಿ ನಾಯಕರು ಹರಿಯ ಬಿಡುತ್ತಿರುವುದು ಅಚ್ಚರಿಯ ನಡೆಯಾಗಿದೆ. ಮೇಲ್ನೋಟಕ್ಕೆ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯರೇ ಕಾರಣವಾದರಾ ಎನ್ನುವ ಪ್ರಶ್ನೆಯನ್ನು ಈ ಟ್ವೀಟ್​ಗಳು ಹುಟ್ಟು ಹಾಕುತ್ತವೆ. ಇದರಿಂದ ಕಾಂಗ್ರೆಸ್​ನ ಸಿಎಂ ಆಯ್ಕೆ ಮೇಲೆ ಪ್ರಭಾವ ಆಗಲಿದೆಯಾ ಎನ್ನುವುದನ್ನು ಕಾದು ನೋಡಬೇಕಿದೆ.

Share This Article
blank

ಬೆಳಿಗ್ಗೆ ಈ ಸೂಪರ್​ ಫುಡ್​ಗಳನ್ನು ಸೇವಿಸಿ: ನಿಮ್ಮ ದೇಹದಲ್ಲಾಗುವ ಸಕಾರಾತ್ಮಕ ಬದಲಾವಣೆ ಗಮನಿಸಿ | Superfoods

Superfoods: ಸಾಮಾನ್ಯವಾಗಿ ಬೆಳಗಿನ ಸಮಯವು ದಿನಪೂರ್ತಿ ಮನಸ್ಥಿತಿಯನ್ನು ನಿರ್ಧರಿಸುತ್ತದೆ. ಎದ್ದ ತಕ್ಷಣ ನೀವು ಏನು ಮಾಡುತ್ತೀರಿ…

ರಸ್ತೆಯಲ್ಲಿ ಬಿದ್ದಿರುವ ಇಂತಹ ವಸ್ತುಗಳನ್ನು ದಾಟಿದ್ರೆ ಕೆಟ್ಟ ಸಮಯ ಆರಂಭವಾಗುತ್ತಂತೆ!: ಏನೀ ವಸ್ತುಗಳು ತಿಳಿಯಿರಿ.. | Vastu

Vastu : ರಸ್ತೆಯಲ್ಲಿ ಹಾಗಾಗ ವಿಚಿತ್ರ ವಸ್ತುಗಳು ಬಿದ್ದಿರುವುದನ್ನು ನಾವು ಗಮನಿಸುತ್ತೇವೆ. ಈ ವಸ್ತುಗಳ ಬಗ್ಗೆ…

blank