More

    ಸಿಬ್ಬಂದಿ ಆರೋಗ್ಯ ವಿಚಾರಿಸಿದ ಎಡಿಜಿಪಿ

    ಬೆಳಗಾವಿ: ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್‌ಕುಮಾರ ಬೆಳಗಾವಿ ಜಿಲ್ಲೆಗೆ ಮಂಗಳವಾರ ಭೇಟಿ ನೀಡಿ ಸಿಬ್ಬಂದಿ ಆರೋಗ್ಯ ವಿಚಾರಿಸಿದರು.

    ನಗರದ ಚನ್ನಮ್ಮ ವೃತ್ತ ಹಾಗೂ ಇತರೆಡೆ ಕರೊನಾ ವೈರಸ್ ನಿಯಂತ್ರಣಕ್ಕಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಧೈರ್ಯ ತುಂಬಿದರು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಮಾಡಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪೊಲೀಸ್ ಇಲಾಖೆಯ ವಾಹನಗಳನ್ನು ಸ್ಯಾನಿಟೈಸರ್‌ನಿಂದ ಆಗಾಗ ತೊಳೆಯುತ್ತಿರಬೆಕು ಎಂದು ಸೂಚಿಸಿದರು.

    ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಬೆಳಗಾವಿ ಸೇರಿ 6 ಜಿಲ್ಲೆಗಳಲ್ಲಿ ಕರೊನಾ ವೈರಸ್ ಪ್ರಕರಣ ಹೆಚ್ಚಾಗಿವೆ. ಬೆಂಗಳೂರಿನ ಕಂಟೈನ್‌ಮೆಂಟ್ ರೆನ್‌ನಲ್ಲಿ 50 ಪ್ಲಾಟೂನ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಿಬ್ಬಂದಿ ಕ್ಷೇಮ ಹಾಗೂ ಸಮಸ್ಯೆ ಆಲಿಸಲು ವಿವಿಧೆಡೆ ಭೇಟಿ ನೀಡುತ್ತಿದ್ದೇನೆ. ಬುಧವಾರ ವಿಜಯಪುರ ಜಿಲ್ಲೆಗೆ ಭೇಟಿ ನೀಡುತ್ತೇನೆ ಎಂದರು.

    ಕೆಎಸ್‌ಆರ್‌ಪಿ ಸಿಬ್ಬಂದಿಗೆ ಸ್ಯಾನಿಟೈಸರ್, ಮಾಸ್ಕ್ ಹಾಗೂ ಹ್ಯಾಂಡ್‌ಗ್ಲೌಸ್ ನೀಡಲಾಗುತ್ತಿದೆ. ಕಂಟೈನ್‌ಮೆಂಟ್ ಝೋನ್‌ನಲ್ಲಿ ಇರುವ ಸಿಬ್ಬಂದಿಗೆ ಪಿಪಿಇ ಕಿಟ್ ನೀಡಲಾಗಿದೆ. ಅವುಗಳನ್ನು ತುರ್ತು ಸಂದರ್ಭದಲ್ಲಿ ಬಳಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts