ಮಂಗಳೂರು: ಉತ್ಸವವೊಂದರ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ವೇದಿಕೆ ದಿಢೀರ್ ಕುಸಿದಿದ್ದು, ರಾಜ್ಯದ ಸಚಿವರು ಹಾಗೂ ಇತರರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಈ ವೇದಿಕೆಯನ್ನು ನದಿಯ ಪಕ್ಕದಲ್ಲೇ ಹಾಕಲಾಗಿದ್ದರಿಂದ ಸ್ವಲ್ಪ ಹೆಚ್ಚೂಕಡಿಮೆ ಆಗಿದ್ದರೂ ದುರಂತ ಸಂಭವಿಸಿರಬಹುದಾದ ಸಾಧ್ಯತೆ ಇತ್ತು.
ಮಂಗಳೂರಿನ ಸಸಿಹಿತ್ಲು ಸಮೀಪದ ನಂದಿನಿ ನದಿ ಹತ್ತಿರ ಈ ಘಟನೆ ನಡೆದಿದೆ. ಇಂದು ಆರಂಭವಾಗಿರುವ ಎರಡು ದಿನಗಳ ನಂದಿನಿ ಉತ್ಸವದ ಉದ್ಘಾಟನೆಗೆ ಸಚಿವರು ಆಗಮಿಸಿದ್ದರು. ನಂದಿನಿ ನದಿ ಉತ್ಸವದ ಪ್ರಯುಕ್ತ ನಂದಿನಿಗೆ ಆರತಿ ಬೆಳಗಲು ನದಿ ಪಕ್ಕದಲ್ಲೇ ಸ್ಟೇಜ್ ಹಾಕಲಾಗಿತ್ತು.
ಸಚಿವ ಸಿ.ಪಿ.ಯೋಗೀಶ್ವರ್ ಉದ್ಘಾಟನೆಗೆ ಮುಂದಾದಾಗ ಅವರೊಂದಿಗೆ ಹೆಚ್ಚು ಜನರು ವೇದಿಕೆ ಮೇಲೆ ನಿಂತಿದ್ದರಿಂದ ಅದು ಕುಸಿದಿದೆ. ಸ್ಟೇಜ್ ನದಿ ಭಾಗಕ್ಕಿಂತ ಹಿಂಬದಿಗೆ ಮುರಿದು ಬಿದ್ದ ಪರಿಣಾಮ ಸಚಿವರು ಸೇರಿ ಇತರ ಗಣ್ಯರು ನದಿಗೆ ಬೀಳುವುದರಿಂದ ಪಾರಾಗಿದ್ದಾರೆ. ಈ ಸಂದರ್ಭ ಕೆಲಕಾಲ ಸ್ಥಳದಲ್ಲಿ ಆತಂಕ ಉಂಟಾಗಿತ್ತು.
ಕಂಬಳದಲ್ಲಿ ಮತ್ತೆ ಸಾಧನೆ ಮೆರೆದ ಮಿಜಾರು ಶ್ರೀನಿವಾಸ ಗೌಡ; 8.96 ಸೆಕೆಂಡ್ಗಳಲ್ಲಿ 100 ಮೀಟರ್ ಓಟ!
ರೇಪ್ ಮಾಡಲು ಯತ್ನಿಸಿದವನ ಮರ್ಮಾಂಗವನ್ನೇ ತುಂಡರಿಸಿದ ಮಹಿಳೆ; ಬುಕ್ಕಾದವು ಎರಡು ಕೇಸು !