More

    ಗಾಳಿಯ ರಭಸಕ್ಕೆ ಕುಸಿದು ಬಿದ್ದ ವೇದಿಕೆ; ಇದು ‘ಕಾಂಗ್ರೆಸ್​​ನ ಸುಂಟರಗಾಳಿ’ ಎಂದ ‘ಕೈ’ ಅಭ್ಯರ್ಥಿ

    ಗದಗ: ಏಕಾಏಕಿ ಉಂಟಾದ ಸುಂಟರಗಾಳಿಯಿಂದಾಗಿ ಕಾಂಗ್ರೆಸ್ ಪಕ್ಷದ ಸಮಾವೇಶದ ವೇದಿಕೆ ನೆಲಸಮವಾಗಿದೆ. ಈ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಗಾಳಿಯ ರಭಸಕ್ಕೆ ವೇದಿಕೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ಭಾರೀ ಅನಾಹುತ ತಪ್ಪಿದೆ.

    ಸಿದ್ದರಾಮಯ್ಯ ಭಾಗವಹಿಸಿದ್ದ ವೇದಿಕೆ

    ಸುಂಟರಗಾಳಿಯ ಅಬ್ಬರಕ್ಕೆ ಕುಸಿದು ಬಿದ್ದಿರುವ ವೇದಿಕೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ ಪರ ಪ್ರಚಾರ ನಡೆಸಿದ್ದರು. ಸದ್ಯ ಘಟನೆ ಸಿದ್ದರಾಮಯ್ಯ ವೇದಿಕೆಯಿಂದ ನಿರ್ಗಮಿಸಿದ ಬಳಿಕೆ ನಡೆದಿದ್ದು, ಅನಾಹುತವೊಂದು ತಪ್ಪಿದೆ.

    ವೇದಿಕೆಯಡಿ ಸಿಲುಕಿದ ಕಾರ್ಯಕರ್ತರು

    ಕುಸಿದು ಬಿದ್ದಿರುವ ವೇದಿಕೆಯಡಿ ಕೆಲ ಕಾಂಗ್ರೆಸ್ ಕಾರ್ಯಕರ್ತರು ಸಿಲುಕಿ ಹಾಕಿಕೊಂಡಿದ್ದಾರೆ. ಈ ವೇಳೆ ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿ ಅಭ್ಯರ್ಥಿ ಸುಜಾತಾ ದೊಡ್ಡಮನಿ ಸೇರಿದಂತೆ ಕಾಂಗ್ರೆಸ್ ನಾಯಕರ ಪರದಾಟ ಪಡುವಂತಾಗಿದೆ.

    ಇದು ಕಾಂಗ್ರೆಸ್​ನ ಸುಂಟರಗಾಳಿ!

    ವೇದಿಕೆ ಕುಸಿದು ಬೀಳುತ್ತಿದ್ದಂತೆ, ಸ್ಥಳದಲ್ಲಿದ್ದ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ವೇದಿಕೆಯಡಿ ಸಿಲುಕಿಕೊಂಡಿದ್ದವರನ್ನು ರಕ್ಷಿಸಿದ್ದಾರೆ. ಘಟನೆ ಬಗ್ಗೆ ದಿಗ್ವಿಜಯ ನ್ಯೂಸ್​ನೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ ಮಾತನಾಡುತ್ತಾ, ಇದು ‘ಕಾಂಗ್ರೆಸ್ ಸುಂಟರಗಾಳಿ’ ಎಂದು ಹೇಳಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts