ತಿರುಪತಿ: ತಿಮ್ಮಪ್ಪನ ಸನ್ನಿಧಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಮಂಗಳವಾರ ಬೆಳ್ಳಂಬೆಳಗೆ ಕಾಲ್ತುಳಿತ ಸಂಭವಿಸಿ ಹಲವು ಭಕ್ತರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಸ ಪಡುವಂತಾಯಿತು.
ಟಿಟಿಡಿಯಿಂದ ನೀಡಲಾಗುವ ಸೇವಾದರ್ಶನ ಟಿಕೆಟ್ ಪಡೆಯುವ ವೇಳೆ ಭಕ್ತರಲ್ಲಿ ಕಾಲ್ತುಳಿತ ಸಂಭವಿಸಿದೆ. ತಿಮ್ಮಪ್ಪನ ದರ್ಶನಕ್ಕಾಗಿ ಟಿಟಿಡಿ ಉಚಿತ ಟಿಕೆಟ್ ನೀಡುತ್ತಿದೆ. ಇದನ್ನು ಪಡೆಯಲು ಭಕ್ತರು ಮುಗಿಬಿದ್ದಿದ್ದರಿಂದ ಕಾಲ್ತುಳಿತ ಸಂಭವಿಸಿದೆ.
ಎರಡು ದಿನಗಳಿಂದ ಭಕ್ತರು ಟಿಕೆಟ್ಗಾಗಿ ಕಾದು ಕುಳಿತಿದ್ದರು. ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಾಲಯದಲ್ಲಿ ಕಳೆದ ವರ್ಷ ಪ್ರವಾಹದಿಂದ ಕೆಲದಿನಗಳ ಕಾಲ ದೇವಸ್ಥಾನವನ್ನು ಮುಚ್ಚಲಾಗಿತ್ತು.