ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿ, ಡಿಎನ್ಎ ಕಂಪನಿ ಹಾಗೂ ಕೆಎಸ್ಸಿಎಗೆ ಹೈಕೋರ್ಟ್ ನೋಟಿಸ್ ಹೊರಡಿಸಿದೆ.
ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ; ಬ್ಲೇಡ್, ಚಾಕು ಸೇರಿ ಹಲವು ವಸ್ತುಗಳು ವಶಕ್ಕೆ| parappana-agrahara
ಆರ್ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೆಡಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿತ್ತು. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ವಿಭಾಗೀಯ ಪೀಠ, ಆರ್ಸಿಬಿ, ಡಿಎನ್ಎ ಕಂಪನಿ ಹಾಗೂ ಕೆ ಎಸ್ ಸಿಎಗೆ ನೋಟಿಸ್ ಜಾರಿ ಮಾಡಿದೆ. ಅರ್ಜಿ ವಿಚಾರಣೆಯನ್ನು ಇದೇ ಜೂನ್ 23ಕ್ಕೆ ನಿಗದಿ ಪಡಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: ರುಚಿಯಲ್ಲಿ ಸಿಹಿಯಾಗಿದ್ದರೂ ಮಧುಮೇಹ ರೋಗಿಗಳು ಈ ಹಣ್ಣುಗಳನ್ನು ತಿನ್ನಬಹುದಂತೆ; health tips
ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಲಕ್ಷಾಂತರ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಕೋರ್ಟ್, ಇಂದು ಅರ್ಜಿ ವಿಚಾರಣೆ ನಡೆಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಘಟನೆಗೆ ಸಂಬಂಧಿಸಿದಂತೆ ಈವರೆಗೂ ಕೈಗೊಂಡ ಕ್ರಮದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ಗೆ ಸಲ್ಲಿಕೆ ಮಾಡಿದೆ. ತನಿಖೆ ಇನ್ನೂ ಬಾಕಿಯಿರುವುದರಿಂದ ಪೂರ್ವಾಗ್ರಹವಿರಬಾರದು, ಮೂರನೇ ವ್ಯಕ್ತಿಗಳ ವಿರುದ್ಧ ಅಭಿಪ್ರಾಯವೆಂದು ಭಾವಿಸಬಾರದು. ಹೀಗಾಗಿ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ ಎಂದು ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹೇಳಿದ್ದಾರೆ.
ಸರ್ಕಾರದ ವಾದ ಕೇಳಿದ ಬಳಿಕ ಹೈಕೋರ್ಟ್, ಮುಚ್ಚಿದ ಲಕೋಟೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿದೆ.
(ಏಜೆನ್ಸೀಸ್)
ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ; ಬ್ಲೇಡ್, ಚಾಕು ಸೇರಿ ಹಲವು ವಸ್ತುಗಳು ವಶಕ್ಕೆ| parappana-agrahara