ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ; ಆರ್​ಸಿಬಿಗೆ ಹೈಕೋರ್ಟ್​ನಿಂದ​ ನೋಟಿಸ್ ಜಾರಿ| Rcb

blank

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​​ಸಿಬಿ, ಡಿಎನ್ಎ ಕಂಪನಿ ಹಾಗೂ ಕೆಎಸ್​ಸಿಎಗೆ ಹೈಕೋರ್ಟ್ ನೋಟಿಸ್ ಹೊರಡಿಸಿದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ; ಬ್ಲೇಡ್, ಚಾಕು ಸೇರಿ ಹಲವು ವಸ್ತುಗಳು ವಶಕ್ಕೆ| parappana-agrahara

ಆರ್​ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೆಡಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿತ್ತು. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ವಿಭಾಗೀಯ ಪೀಠ, ಆರ್​ಸಿಬಿ, ಡಿಎನ್​ಎ ಕಂಪನಿ ಹಾಗೂ ಕೆ ಎಸ್ ಸಿಎಗೆ ನೋಟಿಸ್ ಜಾರಿ ಮಾಡಿದೆ. ಅರ್ಜಿ ವಿಚಾರಣೆಯನ್ನು ಇದೇ ಜೂನ್ 23ಕ್ಕೆ ನಿಗದಿ ಪಡಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ರುಚಿಯಲ್ಲಿ ಸಿಹಿಯಾಗಿದ್ದರೂ ಮಧುಮೇಹ ರೋಗಿಗಳು ಈ ಹಣ್ಣುಗಳನ್ನು ತಿನ್ನಬಹುದಂತೆ; health tips

ಆರ್​ಸಿಬಿ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಲಕ್ಷಾಂತರ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಕೋರ್ಟ್​, ಇಂದು ಅರ್ಜಿ ವಿಚಾರಣೆ ನಡೆಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಘಟನೆಗೆ ಸಂಬಂಧಿಸಿದಂತೆ ಈವರೆಗೂ ಕೈಗೊಂಡ ಕ್ರಮದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಸಲ್ಲಿಕೆ ಮಾಡಿದೆ. ತನಿಖೆ ಇನ್ನೂ ಬಾಕಿಯಿರುವುದರಿಂದ ಪೂರ್ವಾಗ್ರಹವಿರಬಾರದು, ಮೂರನೇ ವ್ಯಕ್ತಿಗಳ ವಿರುದ್ಧ ಅಭಿಪ್ರಾಯವೆಂದು ಭಾವಿಸಬಾರದು. ಹೀಗಾಗಿ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ ಎಂದು ಸರ್ಕಾರದ ಪರ ಅಡ್ವೋಕೇಟ್​ ಜನರಲ್​ ಶಶಿಕಿರಣ್‌ ಶೆಟ್ಟಿ ಹೇಳಿದ್ದಾರೆ.
ಸರ್ಕಾರದ ವಾದ ಕೇಳಿದ ಬಳಿಕ ಹೈಕೋರ್ಟ್, ಮುಚ್ಚಿದ ಲಕೋಟೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿದೆ.
(ಏಜೆನ್ಸೀಸ್)

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ; ಬ್ಲೇಡ್, ಚಾಕು ಸೇರಿ ಹಲವು ವಸ್ತುಗಳು ವಶಕ್ಕೆ| parappana-agrahara

Share This Article

ಯಾರಾದರೂ ನಿಮ್ಮ ಮುಂದೆ ಹಠಾತ್​ ಕುಸಿದುಬಿದ್ರೆ ಏನು ಮಾಡಬೇಕು ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ… Suddenly Collapsed

Suddenly Collapsed : ನೀವು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಯಾರಾದರು ಒಬ್ಬರು ಇದ್ದಕ್ಕಿದ್ದಂತೆ ಕುಸಿದು ಬೀಳುವುದನ್ನು…

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…