More

    2 ತಿಂಗಳಲ್ಲಿ ಐನಾಪುರ ಏತ ನೀರಾವರಿ ಆರಂಭಿಸಿ

    ಚಿಂಚೋಳಿ: ಐನಾಪುರ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಎರಡು ತಿಂಗಳಲ್ಲಿ ಆರಂಭಿಸದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಐನಾಪುರ ಏತ ನೀರಾವರಿ ಅಭಿವೃದ್ಧಿ ಸಮಿತಿ ಎಚ್ಚರಿಕೆ ನೀಡಿದೆ.

    ಈ ಕುರಿತು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರಿಗೆ ಶುಕ್ರವಾರ ಮನವಿಪತ್ರ ಸಲ್ಲಿಸಿದ್ದು, ಐನಾಪುರ ಏತ ನೀರಾವರಿ ಪೂರ್ಣಗೊಂಡರೆ ಸಾಕಷ್ಟು ರೈತರಿಗೆ ಅನುಕೂಲವಾಗಲಿದೆ. ಅಲ್ಲದೆ ಈ ಭಾಗದಲ್ಲಿ ಹಸಿರು ಕ್ರಾಂತಿ ಆಗಲಿದೆ. ಆದರೆ ಸರ್ಕಾರದ ನಿರ್ಲಕ್ಷÈದಿಂದ ಯೋಜನೆ ಕುಂಟುತ್ತಾ ಸಾಗುತ್ತಿದೆ ಎಂದು ಕಿಡಿಕಾರಿದೆ.

    ಈ ಹಿಂದಿನ ಸರ್ಕಾರಗಳು ಐನಾಪುರ ಏತ ನೀರಾವರಿ ಯೋಜನೆಯನ್ನು ಮಂಜೂರು ಮಾಡಿದ್ದು, ಪ್ರಸ್ತುತ ಸರ್ಕಾರ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿಗೆ ಚಾಲನೆ ನೀಡಬೇಕು. ಎರಡು ತಿಂಗಳ ಅವಧಿಯೊಳಗೆ ಕಾಮಗಾರಿ ಪ್ರಾರಂಭಿಸದಿದ್ದರೆ ರೈತರೊಂದಿಗೆ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಹೇಳಿದೆ.

    ಸಮಿತಿಯ ಧನರಾಜ ಮಠಪತಿ, ಶಿವಾನಂದ ಪಾಟೀಲ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts