More

    10 ಕೋಟಿ ರೂ. ವೆಚ್ಚದಲ್ಲಿ ದೇವರಾಯನ ದುರ್ಗದ ಅಭಿವೃದ್ಧಿ ಕಾಮಗಾರಿ ಆರಂಭ

    ತುಮಕೂರು: ಶಾಸಕ ಡಿ.ಸಿ.ಗೌರಿಶಂಕರ್ ಸೂಚನೆಯ ಮೇರೆಗೆ ದೇವರಾಯನ ದುರ್ಗದ ಸಮಗ್ರ ಅಭಿವೃದ್ದಿಗೆ 10 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಆರಂಭವಾಗಿವೆ.

    ಖುದ್ದು ಶಾಸಕರೇ ವಾರಕ್ಕೊಮ್ಮೆ ದೇವರಾಯನದುರ್ಗಕ್ಕೆ ಭೇಟಿ ನೀಡಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಜತೆ ಮಾತುಕತೆ ನಡೆಸಿ ಗುಣಮಟ್ಟದ ಕಾಮಗಾರಿ ಮಾಡಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದ್ದಾರೆ. ದೇವಸ್ಥಾನದ ರಥ ಬೀದಿಯ ಸಿಸಿ ರಸ್ತೆ ಕಾಮಗಾರಿ ಪ್ರಕ್ರಿಯೆ ಚುರುಕಿನಿಂದ ಸಾಗಿದೆ, ದೇವಸ್ಥಾನದ ವಿಮಾನ ಗೋಪುರದಿಂದ ರಥಗೋಪುರ ವರೆಗೆ 500ಮೀ ದುರಸ್ತಿ ಕಾರ್ಯ ಚಾಲ್ತಿಯಲ್ಲಿದೆ, ಒಳ ಚರಂಡಿ ಕಾಮಗಾರಿಗಳೂ ಸಹ ಪ್ರಗತಿಯಲ್ಲಿದೆ.

    ಕ್ಷೇತ್ರದಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಇಲ್ಲಿನ ಸ್ಥಳೀಯರು ಹಾಗೂ ಭಕ್ತರು ಒತ್ತಾಯಿಸಿದ್ದರು. ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದ ಸಂದರ್ಭದಲ್ಲಿ ಶ್ರೀಕ್ಷೇತ್ರದ ಬಗ್ಗೆ ಗಮನ ಸೆಳೆದು 10 ಕೋಟಿ ಅನುದಾನ ಮಂಜೂರು ಮಾಡಿಸಿದ್ದರು. ಚುನಾವಣಾ ಸಂದರ್ಭದಲ್ಲಿ ಈ ಭಾಗದ ಜನರಿಗೆ ನೀಡಿದ್ದ ಭರವಸೆಯಂತೆ ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹಣ ಮಂಜೂರು ಮಾಡಿಸಿ ಭರವಸೆ ಉಳಿಸಿಕೊಂಡಿದ್ದಾರೆ. ಕಾಮಗಾರಿ ಗುಣಮಟ್ಟದ ಬಗ್ಗೆ ಜಾಗೃತೆ ವಹಿಸಲು ಸೂಚಿಸಿದ್ದಾರೆ.

    ಸಾಕಷ್ಟು ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರದ ಭಕ್ತರ ಸಂತೋಷಕ್ಕೆ ಕಾರಣವಾಗಿರುವುದು ಖುಷಿ ನೀಡಿದೆ ಎಂದು ಶಾಸಕ ಡಿ.ಸಿ.ಗೌರಿಶಂಕರ್ ಪ್ರತಿಕ್ರಿಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts