ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2020-21ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಪ್ರವೇಶ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಚಾಲನೆ ನೀಡಿದ್ದು, ಪರಿಷ್ಕೃತ ವೇಳಾಪಟ್ಟಿ ಬಿಡá-ಗಡೆ ಮಾಡಿದೆ.
ನೆರೆ ಹೊರೆ ಶಾಲೆಗಳ ಅಂತಿಮ ಪಟ್ಟಿ ಹಾಗೂ 1ನೇ ತರಗತಿ ಅನá-ದಾನರಹಿತ ಶಾಲೆಗಳಲ್ಲಿ ಲಭ್ಯವಿರುವ ಶೇ.25 ಸೀಟುಗಳ ವಿವರವನ್ನು http://www.schooleducation.kar.nic.in ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಜೂ.8 ರಿಂದ 9ರವರೆಗೆ ಪ್ರಯೋಗಾರ್ಥ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. ಜೂ.10ರಿಂದ 24ರವರೆಗೆ ನೈಜವಾಗಿ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಪರಿಶೀಲನೆ ಜೂ.11ರಿಂದ 29ರವರೆಗೆ ನಡೆಯಲಿದೆ. ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಜು.3ರಂದು ಪ್ರಕಟಿಸಲಾಗುತ್ತದೆ. ಮೊದಲ ಹಂತದ ಸುತ್ತಿನ ಸೀಟು ಹಂಚಿಕೆ ಜು.13ಂದು ಪ್ರಕಟವಾಗಲಿದೆ. ಜು.14ರಿಂದ 21ರವರೆಗೆ ಶಾಲಗಳಲ್ಲಿ ದಾಖಲಾತಿ ಪ್ರಕ್ರಿಯೆ ನಡೆಯಲಿದೆ.
ಜು.28ಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ. ಎರಡನೇ ಸುತ್ತಿನಲ್ಲಿ ಆ್ಕಯೆಾದ ವಿದ್ಯಾರ್ಥಿಗಳಿಗೆ ಜು.28ರಿಂದ ಆ.5ರವರೆಗೆ ಅವಕಾಶ ಕಲ್ಪಿಸಲಾಗುತ್ತದೆ. ಇದೇ ಅವಧಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದಾಖಲಾದ ಮಕ್ಕಳ ವಿವರವನ್ನು ತಂತ್ರಾಂಶದಲ್ಲಿ ಅವಳಡಿಸುವಂತೆಯೂ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಆರೋಗ್ಯ ಸೇತು ಪ್ರಶ್ನಿಸಿ ಪಿಐಎಲ್
ಬೆಂಗಳೂರು: ಕೋವಿಡ್-19 ಸಂಪರ್ಕ ಪತ್ತೆ ಹಚ್ಚಲು ರೂಪಿಸಲಾಗಿರುವ ‘ಆರೋಗ್ಯ ಸೇತು’ ಮೊಬೈಲ್ ಆಪ್ ಬಳಕೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಬೆಂಗ