More

    ಪೊಳ್ಳು ಗ್ಯಾರಂಟಿಗಳಿಂದಾಗಿ ದೀಪಾವಳಿ ಹೊತ್ತಲ್ಲೇ ರಾಜ್ಯ ದಿವಾಳಿ: ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ಕೊಟ್ಟಿದ್ದೇಕೆ ಮಾಜಿ ಸಿಎಂ?

    ಬೆಂಗಳೂರು: ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ ರಾಜ್ಯ ಸರ್ಕಾರ ರೈತರ ಮೇಲೆಯೂ ವಕ್ರದೃಷ್ಟಿ ಬೀರಿದೆ. ಬರ, ವಿದ್ಯುತ್ ಕ್ಷಾಮದಿಂದ ಕಂಗೆಟ್ಟು ಹೋಗಿರುವ ಅನ್ನದಾತರಿಗೆ ಮತ್ತೊಂದು ಬರೆ ಎಳೆದು, ತಾನು ರೈತದ್ರೋಹಿ ಎಂದು ಸಾಬೀತು ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

    ‘ಗ್ಯಾರಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ ಹಣ ನಾಸ್ತಿ’ ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದೆ. ರೈತರಿಗೆ ಹೊಸ ವಿದ್ಯುತ್ ಸಂಪರ್ಕಕ್ಕೆ ಕೊಡುತ್ತಿದ್ದ ಸಬ್ಸಿಡಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ ಹಾಕಿದೆ ಎನ್ನುವ ಸರ್ಕಾರಿ ಆದೇಶ ನೋಡಿ ನನಗೆ ತೀವ್ರ ಆಘಾತ ಉಂಟಾಯಿತು. ಕೇಡುಗಾಲಕ್ಕೆ ಕೋಳಿ ಮೊಟ್ಟೆ ಬದಲು ಮರಿಯನ್ನೇ ಹಾಕಿತು ಎನ್ನುವ ಹಾಗೆ ಕಾಂಗ್ರೆಸ್ ಸರ್ಕಾರ ಎರಡು ಕೈಗಳಿಂದಲೂ ರೈತರ ಮೇಲೆ ಮಣ್ಣು ಹಾಕುತ್ತಿದೆ ಎಂದು ಟೀಕಿಸಿದ್ದಾರೆ.

    ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಿದ್ದ ಅನ್ನದಾತರಿಗೆ ಇದುವರೆಗೆ ಟ್ರಾನ್ಸ್​​ಫಾರ್ಮರ್​, ವಿದ್ಯುತ್ ಕಂಬ, ಅಲ್ಯುಮಿನಿಯಂ ತಂತಿ ಇತ್ಯಾದಿಗಳಿಗೆ ಸರ್ಕಾರವೇ ಸಬ್ಸಿಡಿ ಕೊಡುತ್ತಿತ್ತು. ಚುನಾವಣೆಯಲ್ಲಿ ಮತಕ್ಕಾಗಿ ಯಾವ ಹಸ್ತ ರೈತರ ಪಾದ ಮುಟ್ಟಿ ಮತಯಾಚನೆ ಮಾಡಿತೋ, ಈಗ ಅದೇ ಹಸ್ತ ಅಧಿಕಾರ ಸಿಕ್ಕ ಮೇಲೆ ಅನ್ನದಾತನ ಕೊರಳಿಗೆ ಹಗ್ಗ ಬಿಗಿಯತೊಡಗಿದೆ. ಇದಕ್ಕಿಂತ ಪೈಶಾಚಿಕ ಮನಃಸ್ಥಿತಿ ಮತ್ತೊಂದು ಇರಲು ಸಾಧ್ಯವೇ? ಎಂದೂ ಎಚ್ಡಿಕೆ ಪ್ರಶ್ನೆ ಮಾಡಿದ್ದಾರೆ.

    ಇದನ್ನೂ ಓದಿ: ಪ್ರಧಾನಿ ಮೋದಿ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ ಮುಸ್ಲಿಂ ಮಹಿಳೆ; ವಿರೋಧ ಎದುರಾದ್ರೂ ಛಲ ಬಿಡಲಿಲ್ಲ..

    ತಮ್ಮ ಪಾಲಿನ 24,000 ರೂಪಾಯಿ ಭರಿಸುವುದಕ್ಕೇ ಇನ್ನಿಲ್ಲದ ಕಡುಕಷ್ಟ ಅನುಭವಿಸುತ್ತಿರುವ ರೈತರು, ಇನ್ನು ಮುಂದೆ ಪೂರ್ಣ ವೆಚ್ಚ ಭರಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಕಟುಕರ ಕೈಗೆ ಕರ್ನಾಟಕ ಸಿಕ್ಕಿ ನರಳುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ಪುರಾವೆ ಬೇಕೇ? ಅಧಿಕಾರಕ್ಕೆ ಬಂದಾಗಿನಿಂದ ಸಮಾಧಿ ಸ್ಥಿತಿಯಲ್ಲಿರುವ ಈ ಸರ್ಕಾರವು, ಇಂಥ ಜನದ್ರೋಹಿ ಕೃತ್ಯಗಳಲ್ಲಿ ಬಹಳ ಕ್ರಿಯಾಶೀಲವಾಗಿದೆ ಎಂದಿದ್ದಾರೆ.

    ಸರ್ಕಾರ ಕೂಡಲೇ ಈ ಆದೇಶ ವಾಪಸ್ ಪಡೆಯಲೇಬೇಕು. ಮೊದಲಿನಂತೆ ರೈತರಿಗೆ ಸಬ್ಸಿಡಿ ಕೊಡಬೇಕು. ಒಂದು ವೇಳೆ ಆದೇಶ ವಾಪಸ್ ಪಡೆಯದಿದ್ದರೆ ಜೆಡಿಎಸ್ ಪಕ್ಷ ಸದನದ ಒಳಗೆ-ಹೊರಗೆ ಹೋರಾಟಕ್ಕೆ ಇಳಿಯುತ್ತದೆ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.

    ಇದನ್ನೂ ಓದಿ: ಆಡ್ವಾಣಿಯಿಂದ ಉದ್ಘಾಟನೆ ಆಗಲಿದ್ಯಾ ರಾಮಮಂದಿರ?; ಮಾಜಿ ಉಪ ಪ್ರಧಾನಿ ಮನೆಯಲ್ಲಿ ಬಿಜೆಪಿ ವರಿಷ್ಠರ ದಂಡು

    ಕಾಂಗ್ರೆಸ್ ಬಂಡವಾಳಶಾಹಿ ಮನಃಸ್ಥಿತಿಯ ಲಾಭಕೋರ ಪಕ್ಷ. ಕಸಾಯಿ ಸಂಸ್ಕೃತಿಯ ಕಟುಕ ಪಕ್ಷ. ಅದಕ್ಕೆ ಕರುಣೆ, ದಯೆ, ದಾಕ್ಷಿಣ್ಯ ಎನ್ನುವುದು ಇರುವುದಿಲ್ಲ. ಇಡೀ ಕರ್ನಾಟಕವನ್ನೇ ಎಟಿಎಂ ಮಾಡಿಕೊಂಡು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಈಗ ರೈತರನ್ನೂ ಕೊಳ್ಳೆ ಹೊಡೆಯುತ್ತಿದೆ. ಒಂದು ಕೈಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ರಾವಣರೂಪಿ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ. ವಿನಾಶಕಾಲೇ ವಿಪರೀತ ಬುದ್ಧಿ, ವಿನಾಶಕಾಲೇ ವಿಪರೀತ ಆಸೆ ಎಂದೂ ಅವರು ಹೇಳಿದ್ದಾರೆ.

    ನೋಟ್ ಬ್ಯಾನ್​ನಿಂದ ಆದ ಒಂದೇ ಒಂದು ಪ್ರಯೋಜನವಿದ್ದರೆ ಬಿಜೆಪಿ ಉತ್ತರಿಸಲಿ: ಕಾಂಗ್ರೆಸ್ ಸವಾಲು

    ಪ್ರಧಾನಿ ಮೋದಿಯನ್ನು ಗುರಿಯಾಗಿಸಿ ಪೋಸ್ಟ್ ಮಾಡಿದ ನಟ ಪ್ರಕಾಶ್ ರೈ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts