ಗ್ಯಾರಂಟಿ ಯೋಜನೆಗಳು ಚುನಾವಣೆ ಗಿಮಿಕ್‌ ಅಲ್ಲ: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಗ್ಯಾರಂಟಿ ಜಾರಿಯಿಂದ ಸರ್ಕಾರ ದಿವಾಳಿಯಾಗಿದೆ ಎಂದು ಕೆಲವರು ಸುಳ್ಳು ಹೇಳುತ್ತಿದ್ದಾರೆ. ಅಭಿವೃದ್ಧಿಯಾಗುವುದಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಎಲ್ಲರನ್ನೂ ಒಳಗೊಂಡಂತೆ ರಾಜ್ಯವನ್ನು ನಾವು ಅಭಿವೃದ್ಧಿ ಮಾಡುತ್ತೇವೆ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಬಜೆಟ್​ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ, ಮೊದಲು ಶರಣರ ಚಿಂತನೆ ಓದಿದರು. ಇದರೊಂದಿಗೆ ಡಾ. ರಾಜ್​ಕುಮಾರ್​ ಅಭಿನಯದ ಬಂಗಾರದ ಮನುಷ್ಯ ಚಿತ್ರದ “ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ” ಎಂಬ ಅದ್ಭುತ ಹಾಡಿನ ಸಾಲುಗಳನ್ನು ಉಲ್ಲೇಖಿಸಿದರು. … Continue reading ಗ್ಯಾರಂಟಿ ಯೋಜನೆಗಳು ಚುನಾವಣೆ ಗಿಮಿಕ್‌ ಅಲ್ಲ: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ