More

    ಬಜೆಟ್​ ಮಂಡನೆ ಬೆನ್ನಲ್ಲೇ ದೆಹಲಿ ಪ್ರಯಾಣಕ್ಕೆ ಸಿಎಂ ಬಿಎಸ್​ವೈ ಸಿದ್ಧತೆ

    ಬೆಂಗಳೂರು: ಬಜೆಟ್ ಮಂಡನೆ ಬೆನ್ನಲ್ಲೇ ದೆಹಲಿ ಕಡೆ ಪ್ರಯಾಣ ಬೆಳೆಸಲು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ತಯಾರಾಗಿದ್ದಾರೆ.

    ನಾಳೆ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪುತ್ರಿಯ ವಿವಾಹ ಕಾರ್ಯ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಮದುವೆಯಲ್ಲಿ ಭಾಗಿಯಾಗಲು ನಾಳೆ ಬೆಳಗ್ಗೆ 10.30ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬಿಎಸ್​ವೈ ದೆಹಲಿಗೆ ತೆರಳಲಿದ್ದಾರೆ.

    ಇದಾದ ಬಳಿಕ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮತ್ತೊಂದು ಸುತ್ತಿನ ಸಂಪುಟ ವಿಸ್ತರಣೆ ಬಗ್ಗೆ ಬಿಎಸ್​ವೈ ಚರ್ಚೆ ನಡೆಸುವ ಸಾಧ್ಯತೆ ಇದೆ. ಈಗಾಗಲೇ ‌ಮೂಲ ಬಿಜೆಪಿಯ ಸಚಿವ ಸ್ಥಾನದ ಆಕಾಂಕ್ಷಿಗಳು ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆಯ ಮೊದಲ ಹಂತವಾಗಿ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಲ್ಲ ಅಂದುಕೊಂಡಂತೆ ನಡೆದರೆ, ನಾಳೆ ರಾತ್ರಿಯೇ ಸಿಎಂ ಬಿಎಸ್​ವೈ ಹಿಂದಿರುಗಲಿದ್ದಾರೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts