ಕಾರವಾರ:ಏಳನೇ ವೇತನ ಆಯೋಗದ ವರದಿಯನ್ನು ಶೀಘ್ರ ಜಾರಿ ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಬುಧವಾರ ಮನವಿ ಮಾಡಿದರು.
ವೇತನ ಪರಿಷ್ಕರಣೆ ಸಂಬಂಧ ರಚಿಸಲಾದ ಆಯೋಗದ ಅವಧಿಯನ್ನು 6 ತಿಂಗಳು ವಿಸ್ತರಿಸಲಾಗಿದೆ.
ಆದಷ್ಟು ಬೇಗ ಆಯೋಗದ ವರದಿ ಪಡೆದು, ಅದನ್ನು ಜಾರಿ ಮಾಡಬೇಕು. ವೇತನ ಪರಿಷ್ಕರಣೆ ಮಾಡಬೇಕು.
ಇದನ್ನೂ ಓದಿ: ಗಂಧ ಕದ್ದ ಸಿಕ್ಕಿ ಬಿದ್ದ
ಸರ್ಕಾರಿ ನೌಕರರಿಗೆ ಎನ್ಪಿಎಸ್ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನಾಯ್ಕ, ರಮೇಶ ನಾಯ್ಕ,ರಾಜು ಪೂಜಾರಿ, ವಿ.ಎಂ.ಹೆಗಡೆ , ಇತರರು ಇದ್ದರು.