More

    ರಾಜ್ಯ ನಾಯಕರಿಗೆ ಭವ್ಯ ಸ್ವಾಗತ

    ಶಿವಮೊಗ್ಗ : ರಾಜ್ಯ ಉಸ್ತುವಾರಿ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ನಗರದ ಹೆಲಿಪ್ಯಾಡ್​ನಲ್ಲಿ ಭವ್ಯ ಸ್ವಾಗತ ಸಿಕ್ಕಿತು. ಅವರ ಜತೆ ಹೆಲಿಕಾಪ್ಟರ್​ನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ ಕೂಡ ಆಗಮಿಸಿದರು.

    ಎರಡು ದಿನಗಳ ಬಿಜೆಪಿ ವಿಶೇಷ ಸಭೆ, ಕಾರ್ಯಕಾರಣಿ ಸಭೆ ಹಿನ್ನೆಲೆಯಲ್ಲಿ ಒಟ್ಟಿಗೆ ಬಂದಿಳಿದ ನಾಯಕರಿಗೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಹರತಾಳ ಹಾಲಪ್ಪ, ಎಂಎಲ್​ಸಿಗಳಾದ ಆಯನೂರು ಮಂಜುನಾಥ, ಎಸ್.ರುದ್ರೇಗೌಡ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮತ್ತಿತರರು ಸ್ವಾಗತ ಕೋರಿದರು.

    ಹೆಲಿಪ್ಯಾಡ್​ನಿಂದ ಪ್ರವಾಸಿ ಮಂದಿರದ ಮುಖ್ಯ ದ್ವಾರದವರೆಗೆ ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆಯಲ್ಲಿ ಗಣ್ಯರನ್ನು ಕರೆತರಲಾಯಿತು. ಅದಕ್ಕೂ ಮೊದಲು ಸಕ್ರೆಬೈಲ್ ಬಳಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್ ಅವರಿಗೆ ಆನೆಯಿಂದ ಹೂಮಾಲೆ ಹಾಕಿಸಿ ಬರಮಾಡಿಕೊಳ್ಳಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts