ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪ್ರತಾಪ್ ಸಿಂಹ್ ನಾಯಕ್, ಮಾಜಿ ಸಚಿವ ಎಂಟಿಬಿ ನಾಗರಾಜ್, ಆರ್.ಶಂಕರ್ ಹಾಗೂ ಸುನೀಲ್ ವಲ್ಯಾಪುರೆ ಅವರಿಗೆ ಪರಿಷತ್ ಚುನಾವಣೆ ಟಿಕೆಟ್ ಘೋಷಣೆಯಾಗಿದೆ. ಇದನ್ನೂ ಓದಿ: ಇದು ಯುದ್ಧ ಮಾಡುವ ಹೊತ್ತಲ್ಲ
ಸುನೀಲ್ ವಲ್ಯಾಪುರೆಗೆ ಪರಿಷತ್ ಟಿಕೆಟ್ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದರು. ಕೊಟ್ಟ ಮಾತಿನಂತೆ ಟಿಕೆಟ್ ಘೋಷಣೆ ಮಾಡುವಲ್ಲಿ ಬಿಎಸ್ವೈ ಯಶಸ್ವಿಯಾಗಿದ್ದಾರೆ.
ಇನ್ನು ಕಾಂಗ್ರೆಸ್ನಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಸೋತಿದ್ದ ಎಂಟಿಬಿ ನಾಗರಾಜ್ ಅವರಿಗೂ ಟಿಕೆಟ್ ದೊರಕಿದ್ದು, ಜೆಡಿಎಸ್ನಿಂದ ರಾಜೀನಾಮೆ ನೀಡಿ ಬಿಜೆಪಿ ಸೇರಿ ಉಪ ಚುನಾವಣೆ ಸೋತಿದ್ದ ಎಚ್.ವಿಶ್ವನಾಥ್ ಅವರಿಗೆ ಈ ಬಾರಿಯು ಲಕ್ ಕೈಕೊಟ್ಟಿದೆ. ಇದನ್ನೂ ಓದಿ: ಮಹೇಶ್ ಎದುರು ಕನ್ನಡ ಸ್ಟಾರ್: ಪ್ರಿನ್ಸ್ ಜತೆ ನಟಿಸಲಿರುವ ನಟ ಯಾರು?
ಪರಿಷತ್ ಟಿಕೆಟ್ ಘೋಷಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಮೇಲುಗೈ ಸಾಧಿಸಿದ್ದು, ಬಿಎಸ್ವೈ ಹೇಳಿದ ವ್ಯಕ್ತಿಗಳಿಗೆ ಹೈಕಮಾಂಡ್ ಟಿಕೆಟ್ ನೀಡಿದೆ. ಎಂಟಿಬಿ, ಆರ್.ಶಂಕರ್ ಹಾಗೂ ಸುನೀಲ್ ವಲ್ಯಾಪುರೆ ಬಿಎಸ್ವೈ ಸೂಚಿಸಿದ ಹೆಸರುಗಳಾಗಿವೆ. (ದಿಗ್ವಿಜಯ ನ್ಯೂಸ್)