More

    ಹೊಸನಗರದಲ್ಲಿ ರಾಜ್ಯಮಟ್ಟದ ಕೃಷಿ ಮೇಳ

    ಹೊಸನಗರ: ಜೆಸಿಐ ಹೊಸನಗರ ಡೈಮಂಡ್ ಮತ್ತು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಹಯೋಗದಲ್ಲಿ ಜ.12ರಿಂದ ಮೂರು ದಿನಗಳ ಕಾಲ ಹೊಸನಗರ ನೆಹರು ಮೈದಾನದಲ್ಲಿ ರಾಜ್ಯಮಟ್ಟದ ಕೃಷಿ ಮೇಳ ಹಮ್ಮಿಕೊಳ್ಳಲಾಗಿದೆ.
    ಶುಕ್ರವಾರ ಸಂಜೆ 5 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕೃಷಿ ಮೇಳ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ವಹಿಸಲಿದ್ದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಗತಿಪರ ಕೃಷಿಕರನ್ನು ಸನ್ಮಾನಿಸಲಿದ್ದಾರೆ. ಶಾಸಕ ಆರಗ ಜ್ಞಾನೇಂದ್ರ ಅವರು ನಿವೃತ್ತ ಸೈನಿಕರನ್ನು ಸನ್ಮಾನಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ.ಜಗದೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸುಧೀರ್, ಜಿ.ಎನ್.ಪರಮೇಶ್ವರ್, ತುಂಗಾ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಡಿ.ಆರ್.ವಿನಯಕುಮಾರ್, ಮ್ಯಾಮ್ಕೋಸ್ ನಿರ್ದೇಶಕ ಕೆ.ವಿ. ಕೃಷ್ಣಮೂರ್ತಿ, ಶಿಮುಲ್ ನಿರ್ದೇಶಕ ಎಚ್.ಎನ್.ವಿದ್ಯಾಧರ, ಡಿಆರ್‌ಸಿಎಸ್ ವ್ಯವಸ್ಥಾಪಕ ನಿರ್ದೇಶಕ ವಾಸುದೇವ್, ಗುತ್ತಿಗೆದಾರ ಸಿ.ವಿ.ಚಂದ್ರಶೇಖರ್, ಕೀಳಂಬಿ ಮೀಡಿಯಾ ನೆಟ್‌ವರ್ಕ್ ಮುಖ್ಯಸ್ಥ ರಾಜೇಶ ಕೀಳಂಬಿ ಭಾಗವಹಿಸುವರು. ಕಾರ್ಯಕ್ರಮದ ನಂತರ ಗಂಗಾವತಿ ಪ್ರಾಣೇಶ್ ತಂಡದವರಿಂದ ನಗೆ ಹಬ್ಬ ಆಯೋಜಿಸಲಾಗಿದೆ.
    13ರಂದು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಸಂಜೆ ಐದು ಗಂಟೆಗೆ ನೆಹರು ಮೈದಾನದಲ್ಲಿ ಶಾಖಾಹಾರಿ ಚಲನಚಿತ್ರದ ಸಾಂಗ್ ರಿಲೀಸ್, ಟೀಮ್ ಆತ್ರೇಯ ಅವರಿಂದ ಸಂಗೀತ ಮತ್ತು ನೃತ್ಯ ಕಾರ್ಯಕ್ರಮವಿದೆ. ಈ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಭಾಗವಹಿಸಲಿದ್ದಾರೆ.
    14ರಂದು ಬೆಳಗ್ಗೆ 10.30ಕ್ಕೆ ಕೃಷಿ ವಿಚಾರಗೋಷ್ಠಿ ನಡೆಯಲಿದೆ. ಅಡಕೆಯಲ್ಲಿ ಅಂತರ್ ಬೆಳೆ ಮತ್ತು ಅಡಕೆ ಎಲೆಚುಕ್ಕೆ ರೋಗ ನಿರ್ವಹಣೆ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ವಿಜ್ಞಾನಿಗಳು ಭಾಗವಹಿಸಿ ನೆರವೇರಿಸಲಿದ್ದಾರೆ ಎಂದು ಜೆಸಿಐ ಡೈಮಂಡ್ ಅಧ್ಯಕ್ಷ ಮಧುಸೂದನ್ ನಾವಡ, ಕಾರ್ಯದರ್ಶಿ ಎಸ್.ಅರವಿಂದ್, ವಿನಾಯಕ ಕರಬ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts