More

    ನೃತ್ಯ ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    ವಿಜಯಪುರ: ಇಲ್ಲಿನ ವಚನ ಪಿತಾಮಹ ಡಾ..ಗು.ಹಳಕಟ್ಟಿ ಸ್ಮಾರಕ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಯುವಜನೋತ್ಸವದಲ್ಲಿ ಲಂಬಾಣಿ ನೃತ್ಯ ಪ್ರದರ್ಶಿಸಿ ಪ್ರಥಮ ಸ್ಥಾನ ಪಡೆದ ನಗರದ ಬಂಜಾರಾ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ರಾಜ್ಯಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾಗಿದ್ದಾರೆ.

    ಜಿಲ್ಲಾಡಳಿತ, ಜಿಪಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಿಎಲ್‌ಡಿಇ ಸಂಸ್ಥೆಯ ಸಂಗನಬಸವ ಸ್ವಾಮೀಜಿ ಔಷಧ ಮಹಾವಿದ್ಯಾಲಯ ಸಹಯೋಗದಲ್ಲಿ ಯುವಜನೋತ್ಸವ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳ ಸಾಧನೆಗೆ ನೃತ್ಯ ಮಾರ್ಗದರ್ಶಕಿ ಜಯಶ್ರೀ ರಾಠೋಡ, ತಂಡದ ವ್ಯವಸ್ಥಾಪಕ ಸೋಮಶೇಖರ ರಾಠೋಡ, ಸಂಸ್ಥೆ ಅಧ್ಯಕ್ಷ ಡಿ.ಎಲ್.ಚವ್ಹಾಣ, ಕೆ.ಜಿ.ರಾಠೋಡ, ಆರ್.ಡಿ.ಚವ್ಹಾಣ, ಇ.ಡಿ.ಲಮಾಣಿ ಹರ್ಷ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts