ವಿಜಯವಾಣಿ ಸುದ್ದಿಜಾಲ ಗದಗ
ನಗರದ ಮನೋರಮಾ ಕಾಲೇಜಿನಲ್ಲಿ ಮಂಗಳವಾರ ರಾಜ್ಯ ಬರಹಗಾರರ ವತಿಯಿಂದ ಜಿಲ್ಲಾ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆರ್. ಎಸ್. ಬುರಡಿ, ಶಾಲಾ ಮಕ್ಕಳ ಜೊತೆ ಮಾತನಾಡುವುದು ಸುಲಭ. ಆದರೆ ಸಾಹಿತಿಗಳು, ಬುದ್ದೀಜಿವಿಗಳ ಜತೆ ಮಾತನಾಡಬೇಕಾದರೆ ಎಚ್ಚರಿಕೆಯಿಂದ ಮಾತನಾಡಬೇಕಾಗುತ್ತದೆ. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಕನ್ನಡ ಕಲಿಸಿ ಕನ್ನಡ ಉಳಿಸುವುದು ಎಲ್ಲರ ಜವಾಬ್ದಾರಿ ಆಗಿದೆ ಎಂದರು.
ಮನೋರಮಾ ಕಾಲೇಜು ಪ್ರಾಚಾರ್ಯ ಬಿ. ಎಸ್. ಹಿರೇಮಠ ಮಾತನಾಡಿ, ಕರ್ನಾಟಕ ಏಕೀಕರಣವನ್ನು ಪ್ರಬಲವಾಗಿ ಪ್ರತಿಪಾದಿಸಿದವರಲ್ಲಿ ಆಲೂರ ವೆಂಕಟರಾಯರು, ಜಕ್ಕಲಿ ಗ್ರಾಮದ ಅಂದಾನಪ್ಪ ದೊಡ್ಡಮೇಟಿ, ಡಾ. ಎಚ್. ಎನ್. ಹೂಗಾರ, ಸಂಶಿ ಭೂಸನೂರಮಠ, ಡಾ. ಆರ್. ಸಿ. ಹಿರೇಮಠ, ಚನ್ನವಿರ ಕಣವಿ ಸೇರಿದಂತೆ ಸಾಕಷ್ಟು ಜನ ಕವಿಗಳು, ಕನ್ನಡ ಅಭಿಮಾನಿಗಳು ತ್ಯಾಗದ ಲದಿಂದ ಕರ್ನಾಟಕ ಎಂಬ ಹೆಸರು ಬಂದಿದೆ ಎಂದರು.
ದೊರೆಸ್ವಾಮಿಮಠ ಭೈರನಟ್ಟಿ ಶಾಂತಲಿಂಗ ಶ್ರೀಗಳು ಮಾತನಾಡಿ, ಎಲ್ಲರೂ ಕನ್ನಡ ಉಳಿಸಿ ಬೆಳಸಲು ಶ್ರಮವಹಿಸಬೇಕು. ಬರಹಗಾರರ ಸಂಟನೆಯು ಕವಿಗೋಷ್ಠಿ ಹಮ್ಮಿಕೊಂಡಿರುವುದು ಸಂತಸದ ವಿಚಾರ. ಎಲ್ಲಾ ಕವಿಗಳು, ಸಾಹಿತಿಗಳು ಬರೆಯುವ ಕವನಗಳು ಸಾಮಾಜಿಕ ಸಾಮರಸ್ಯ, ಸಾಮಾಜಿಕ ಜನರ ಬದುಕು ಹಸನ ಮಾಡುವಂತ ಕವಿತೆ ಆಗಿರಲಿ ಎಂದರು. ಕಾರ್ಯಕ್ರಮದಲ್ಲಿ ಬರಹಗಾರರನ್ನು ಸನ್ಮಾನಿಸಲಾಯಿತು.
ಡಾ. ಕಲಾಶ್ರೀ ಹಾದಿಮನಿ ಅಧ್ಯಕ್ಷತೆ ವಹಿಸಿದ್ದರು. ಎನ್. ಎಂ. ಕುಡತರಕರ, ಕಿಶೋರ ಮುದಗಲ್ಲ, ಪ್ರೊ. ಶರಣು ಪೂಜಾರ, ಕೆ. ಎ. ಬಳಿಗಾರ, ಬಸವರಾಜ ಕ್ಯಾರಕೊಪ್ಪ, ಈಶ್ವರ ಕುರಿ ಹಲವರು ಇದ್ದರು.
ರಾಜ್ಯ ಬರಹಗಾರರ ಜಿಲ್ಲಾ ಮಟ್ಟದ ಕವಿಗೋಷ್ಠಿ

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips
ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…
ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips
ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…
ವೇಜ್, ನಾನ್ವೆಜ್ ಖಾದ್ಯ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!
Tomato : ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು ಕರಿ, ಗ್ರೇವಿ, ಸೂಪ್…