More

    ಮತ್ತೇನಾಗುತ್ತೆ ನೀಟ್​, ಜೆಇಇ ಭವಿಷ್ಯ? ಸುಪ್ರೀಂ ಕೋರ್ಟ್​ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ ರಾಜ್ಯಗಳು

    ನವದೆಹಲಿ: ಕರೊನಾ ಸಂಕಷ್ಟದ ಸಮಯದಲ್ಲಿ ಪರೀಕ್ಷೆಗಳನ್ನು ನಡೆಸುವ ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸಿ ಆರು ರಾಜ್ಯಗಳು ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿವೆ.

    ಪಶ್ಚಿಮ ಬಂಗಾಳ, ಜಾರ್ಖಂಡ್, ಚತ್ತೀಸ್​ಗಢ್​, ಮಹಾರಾಷ್ಟ್ರ, ಪಂಜಾಬ್​ ಹಾಗೂ ರಾಜಸ್ಥಾನ ಸರ್ಕಾರಗಳು ಸುಪ್ರೀಂ ಕೋರ್ಟ್​ ಆಗಸ್ಟ್​ 17ರಂದು ನೀಡಿರುವ ಆದೇಶವನ್ನು ಪ್ರಶ್ನಿಸಿವೆ.

    ಇದನ್ನೂ ಓದಿ; ಹಿರಿಯರು ಅಲ್ಲ, ಕಿರಿಯರೂ ಅಲ್ಲ; ಕೋವಿಡ್​ ಹರಡಲು ಇವರೇ ಕಾರಣ….! 

    ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್​) ಸೆ.16ರಮದು ನಿಗದಿಯಾಗಿದೆ. ಪ್ರತಿಷ್ಠಿತ ಇಂಜಿನಿಯರಿಂಗ್​ ಕಾಲೇಜುಗಳಲ್ಲಿ ಕಲಿಕೆಗೆ ನಡೆಸುವ ಜೆಇಇಯನ್ನು ಸೆ. 1-6ರ ವರೆಗೆ ನಡೆಸಲಾಗುತ್ತಿದೆ.

    ಆದರೆ, ಕರೊನಾ ಸಂಕಷ್ಟದ ಸಮಯದಲ್ಲಿ 28 ಲಕ್ಷ ವಿದ್ಯಾರ್ಥಿಗಳ ಭವಿಷ್ಯವನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ. ಪರೀಕ್ಷೆಯನ್ನು ಮುಂದೂಡುವಂತೆ ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿವೆ.

    ಇದನ್ನೂ ಓದಿ; ಅಂತಿಮ ಪರೀಕ್ಷೆ ಬರೆಯಲೇ ಬೇಕು; ಯುಜಿಸಿ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್​ ವ್ಯಾಖ್ಯಾನವೇನು? 

    ಇದಕ್ಕೂ ಮುನ್ನ, ಪರೀಕ್ಷೆ ಮುಂದೂಡಿಕೆಗೆ ಇಂಜಿನಿಯರಿಂಗ್​ ಹಾಗೂ ಮೆಡಿಕಲ್​ ಕಾಲೇಜುಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​, ವಿದ್ಯಾರ್ಥಿಗಳ ಜೀವನದ ಒಂದು ಅಮೂಲ್ಯ ವರ್ಷವನ್ನು ಹಾಳು ಮಾಡುವುದು ಸರಿಯಲ್ಲ, ಕರೊನಾ ನಡುವೆಯೂ ಬದುಕು ಸಾಗಿಸಲೇಬೇಕಿದೆ. ಹೀಗಾಗಿ ಪರೀಕ್ಷೆ ಮುಂದೂಡುವುದಿಲ್ಲ ಎಂದು ಆದೇಶ ನೀಡಿತ್ತು.

    ಶುರುವಾಯ್ತು 225 ರೂ. ಬೆಲೆಯ ಕರೊನಾ ಲಸಿಕೆ ಕ್ಲಿನಿಕಲ್​ ಟ್ರಯಲ್​; ಮೈಸೂರು ಸೇರಿ 17 ಕಡೆ ಪ್ರಯೋಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts