ನವದೆಹಲಿ: ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (NEET) ಹಾಗೂ ಇಂಜಿನಿಯರಿಂಗ್ ಕೋರ್ಸ್ಗಳ ಜೆಇಇಯನ್ನು ಮುಂದೂಡುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಎಲ್ಲ ರಾಜ್ಯಗಳ ಸಿಎಂ ಗಳಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.
ಸೆಪ್ಟಂಬರ್ನಲ್ಲಿ ನೀಟ್ ಪರೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿದೆ. ಆದರೆ, ಈ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಸಿದ್ಧರಾಗಿಲ್ಲ. ಕರೊನಾ ಪರಿಸ್ಥಿತಿ ಸುಧಾರಿಸಿ ಪರೀಕ್ಷೆಗೆ ಹಾಜರಾಗುವ ಸನ್ನಿವೇಶ ಉಂಟಾಗುವವರೆಗೆ ಪರೀಕ್ಷೆಗೆ ಮುಂದೂಡುವಂತೆ ಸುಪ್ರೀಂ ಕೋರ್ಟ್ಗೆ ಮನವಿ ಮಾಡೋಣ ಎಂದು ಬ್ಯಾನರ್ಜಿ ಹೇಳಿದ್ದಾರೆ.
ಇದನ್ನೂ ಓದಿ; ಮೋರಾಟೋರಿಯಂ ಅವಧಿಗೇಕೆ ಹೆಚ್ಚುವರಿ ಬಡ್ಡಿ; ನಿಲುವು ಸ್ಪಷ್ಟಪಡಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
ಪ್ರಧಾನಮಂತ್ರಿ ನಮ್ಮ ಅಹವಾಲುಗಳನ್ನು ಕೇಳುವುದಿಲ್ಲ. ಸಹಕಾರ ತತ್ವದ ಒಕ್ಕೂಟ ವ್ಯವಸ್ಥೆಯ ಹೆಸರಿನಲ್ಲಿ ರಾಜ್ಯಗಳನ್ನು ತುಳಿಯಲಾಗುತ್ತಿದೆ ಎಂದು ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲರೂ ಒಂದಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರೋಣ ಎಂದು ಅವರು ಹೇಳಿದ್ದಾರೆ.
ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ನೀಟ್, ಜೆಇಇಗೆ ವಿರೋಧ ವ್ಯಕ್ತವಾಗಿದೆ. ದೆಹಲಿಯಂತೂ ಪರೀಕ್ಷೆ ನೀವೇ ನಡೆಸಿಕೊಳ್ಳಿ ಎಂದು ಹೇಳಿದೆ. ಒಡಿಶಾ, ಪಂಜಾಬ್, ಜಾರ್ಖಂಡ್ನಲ್ಲೂ ಪರೀಕ್ಷೆ ಮುಂದೂಡಿ ಎಂಬ ಕೂಗು ಕೇಳಿ ಬಂದಿದೆ.
ಶುರುವಾಯ್ತು 225 ರೂ. ಬೆಲೆಯ ಕರೊನಾ ಲಸಿಕೆ ಕ್ಲಿನಿಕಲ್ ಟ್ರಯಲ್; ಮೈಸೂರು ಸೇರಿ 17 ಕಡೆ ಪ್ರಯೋಗ