More

    Covid 19; ರಾಜ್ಯಗಳಿಗೆ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ ಸೂಚನೆ

    ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್​-19 ಪ್ರಕರಣಗಳು ಏರಿಕೆಯಾಗುತ್ತಿದ್ದು ರಾಜ್ಯಗಳಿಗೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

    ಶುಕ್ರವಾರ ಈ ಕುರಿತು ವರ್ಚುವಲ್​ ಮೂಲಕ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್​ ಮಾಂಡವೀಯಾ ಅಗತ್ಯ ಕಟ್ಟೆಚ್ಚರ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ಧಾರೆ ಎಂದು ತಿಳಿದು ಬಂದಿದೆ.

    ಜೀನೋಮ್​ ಸೀಕ್ವೆನ್ಸಿಂಗ್​ ಜೊತೆಗೆ ಕೋವಿಡ್​ ಗುಣಲಕ್ಷಣ ಹೊಂದಿರುವವರ ಮೇಲೆ ತೀವ್ರ ನಿಗಾ ವಹಿಸಬೇಕು. ಅಗತ್ಯ ಬಿದ್ದಲ್ಲಿ ಈ ಹಿಂದೆ ಕೋವಿಡ್​ ಅಲೆಗಳು ಸಂಭವಿಸಿದ ಸಮಯದಲ್ಲಿ ಅನುಸರಿಸಿದ್ದ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಸಲಹೆ ನೀಡಿದ್ದಾರೆ.

    ಇದನ್ನೂ ಓದಿ: ನಾನು ಕಾಂಗ್ರೆಸ್​ ತೊರೆದು ಬಿಜೆಪಿ ಸೇರುತ್ತೇನೆ ಎಂದು ಊಹಿಸಿರಲಿಲ್ಲ: ಕಿರಣ್​ ಕುಮಾರ್​​ ರೆಡ್ಡಿ

    ಏಪ್ರಿಲ್​ 8 ಮತತ್ಉ 9ರಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ. ಏಪ್ರಿಲ್​ 10 ಮತ್ತು 11ರಂದು ಮೂಲಭೂತ ಸೌಕರ್ಯಗಳ ಪರಿಶೀಲನೆಗಾಗಿ ಮಾಕ್​ ಡ್ರಿಲ್​ ನಡೆಸಿ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್​ ಮಾಂಡವೀಯ ಆದೇಶಿಸಿದ್ದಾರೆ.

    ಸಭೆಯಲ್ಲಿ ವಿವಿಧ ರಾಜ್ಯ ಸರ್ಕಾರಗಳ ಆರೋಗ್ಯ ಮಂತ್ರಿಗಳು, ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts