ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದ್ದು ರಾಜ್ಯಗಳಿಗೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.
ಶುಕ್ರವಾರ ಈ ಕುರಿತು ವರ್ಚುವಲ್ ಮೂಲಕ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅಗತ್ಯ ಕಟ್ಟೆಚ್ಚರ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ಧಾರೆ ಎಂದು ತಿಳಿದು ಬಂದಿದೆ.
ಜೀನೋಮ್ ಸೀಕ್ವೆನ್ಸಿಂಗ್ ಜೊತೆಗೆ ಕೋವಿಡ್ ಗುಣಲಕ್ಷಣ ಹೊಂದಿರುವವರ ಮೇಲೆ ತೀವ್ರ ನಿಗಾ ವಹಿಸಬೇಕು. ಅಗತ್ಯ ಬಿದ್ದಲ್ಲಿ ಈ ಹಿಂದೆ ಕೋವಿಡ್ ಅಲೆಗಳು ಸಂಭವಿಸಿದ ಸಮಯದಲ್ಲಿ ಅನುಸರಿಸಿದ್ದ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ನಾನು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತೇನೆ ಎಂದು ಊಹಿಸಿರಲಿಲ್ಲ: ಕಿರಣ್ ಕುಮಾರ್ ರೆಡ್ಡಿ
ಏಪ್ರಿಲ್ 8 ಮತತ್ಉ 9ರಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ. ಏಪ್ರಿಲ್ 10 ಮತ್ತು 11ರಂದು ಮೂಲಭೂತ ಸೌಕರ್ಯಗಳ ಪರಿಶೀಲನೆಗಾಗಿ ಮಾಕ್ ಡ್ರಿಲ್ ನಡೆಸಿ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಆದೇಶಿಸಿದ್ದಾರೆ.
ಸಭೆಯಲ್ಲಿ ವಿವಿಧ ರಾಜ್ಯ ಸರ್ಕಾರಗಳ ಆರೋಗ್ಯ ಮಂತ್ರಿಗಳು, ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.