ಬೆಂಗಳೂರು/ಬೆಳಗಾವಿ: ರಾಷ್ಟ್ರೀಯ ಪಿಂಚಣಿ ಯೋಜನೆ ನಮಗೆ ಬೇಡವೇ ಬೇಡ, ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ತನ್ನಿ ಎಂದು ರಾಜ್ಯ ಸರ್ಕಾರಿ ನೌಕರರು ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಡಿ.19ರಿಂದ ಸಾವಿರಾರು ಸಂಖ್ಯೆಯಲ್ಲಿ ರಾಜಧಾನಿಗೇ ಬಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಇದೀಗ ಅವರಿಗೆ ನಿರಾಸೆಯಾಗುವಂತಹ ಸುದ್ದಿ ಬಂದಿದೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಈ ವಿಷಯ ಕುರಿತು ಶಾಸಕ ಯಶವಂತರಾಯ ಪಾಟೀಲ್ ಅವರು ಗಮನ ಸೆಳೆಯುವ ಸೂಚನೆ ಮಂಡಿಸಿದ್ದರು. ಅದಕ್ಕೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಉತ್ತರ ನೀಡಿದ್ದಾರೆ. ‘‘ಹಳೇ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಪ್ರಸ್ತಾವನೆಯು ಸರ್ಕಾರದ ಮುಂದೆ ಇಲ್ಲ’’ ಎಂದು ಬೊಮ್ಮಾಯಿ ಅವರು ಸ್ಪಷ್ಟ ಮಾತುಗಳಲ್ಲಿ ಲಿಖಿತರೂಪದಲ್ಲಿ ತಿಳಿಸಿದ್ದಾರೆ.
ಸಿಎಂ ನೀಡಿರುವ ಉತ್ತರದ ಪೂರ್ತಿ ವಿವರ ಇಲ್ಲಿದೆ…
400 ರೂ. ದುಡಿಯುವ ದಿನಗೂಲಿಯ ಮನೆಗೆ ಐಟಿ ನೋಟಿಸ್; 14 ಕೋಟಿ ರೂ. ಬಾಕಿ ಇದೆ ಎಂದ ಆದಾಯ ತೆರಿಗೆ ಅಧಿಕಾರಿಗಳು!