ಜೈಪುರ: 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ಇಂದು (ನವೆಂಬರ್ 25) ಮತದಾನ ನಡೆಯುತ್ತಿದ್ದು, ಆಡಳಿತರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಮುಗಿಲು ಮುಟ್ಟಿದೆ. ಇದೀಗ ಎರಡು ಅಭ್ಯರ್ಥಿಗಳ ನಡುವಿನ ವಾಕ್ಸಮರದಿಂದಾಗಿ ಕಲ್ಲೆಸೆತ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ರಾಜಸ್ಥಾನದ ಸಿಕಾರ್ನಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಹಕಂ ಅಲಿ ಖಾನ್ ಮತ್ತು ಸ್ವತಂತ್ರ ಅಭ್ಯರ್ಥಿ ಮಧುಸೂದನ್ ಭಿಂಡಾ ನಡುವಿನ ವಾಕ್ಸಮರ ಕಲ್ಲೆಸೆತಕ್ಕೆ ಕಾರಣವಾಗಿದ್ದು, ಘಟನೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್ಗೆ ಮೋದಿ ಭೇಟಿ; ಪ್ರಧಾನಿ ನಡೆಯನ್ನು ಹಾಡಿಹೊಗಳಿದ ಮಾಜಿ ಕೋಚ್
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ಪ್ರಸಾದ್, ವಾರ್ಡ್ ನಂ 40ರ ಬೋಚಿವಾಲ ಭವನ ಮತಗಟ್ಟೆಯಲ್ಲಿ ಘಟನೆ ಸಂಭವಿಸಿದ್ದು, ಅಡ್ಡಮತದಾನ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಕಾರಣ ವಾಕ್ಸಮರದಿಂದಾಗಿ ಶುರುವಾದ ಗಲಾಟೆ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ನಡೆದಿದೆ.
ಘಟನೆಯಲ್ಲಿ ಪೊಲೀಸ್ ಅಧಿಕಾರಿ ರಾಕೇಶ್ ಗಂಭೀರವಾಗಿ ಗಾಯಗೊಂಢಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಗುಂಪುಗಳನ್ನು ಚದುರಿಸಲಾಗಿದ್ದು, ಈ ರೀತಿಯ ಘಟನೆಗಳು ಮರುಕಳಿದಂತೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಎಲ್ಲರಿಗೂ ಭದ್ರತೆ ಒದಗಿಸಲಾಗಿದ್ದು, ಜನರು ತಪ್ಪದೇ ಮತದಾನ ಮಾಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ಪ್ರಸಾದ್ ಜನತೆಯಲ್ಲಿ ಮನವಿ ಮಾಡಿದ್ದಾರೆ.