More

    VIDEO| ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಪ್ರತಿಭಟನೆ; 360 ಮಂದಿ ವಿರುದ್ಧ ಪ್ರಕರಣ ದಾಖಲು

    ಮುಂಬೈ: ಮರಾಠ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಗುಂಪೊಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.

    ಘಟನೆಯಲ್ಲಿ ಹಲವು ಪೊಲೀಸ್​ ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದು, ಪ್ರತಿಭಟನಾ ನಿರತರ ಮೇಲೆ ಲಾಠಿ ಚಾರ್ಜ್​, ಜಲಫಿರಂಗಿ, ಅಶ್ರುವಾಯು ಪ್ರಯೋಗಿಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

    ಇದನ್ನೂ ಓದಿ: ಮತ್ತೆ ಆಪರೇಷನ್​ ಕಮಲ ಶುರುವಾಗಲಿದೆ, ಬೇಕಿದ್ದರೆ ಕಾದು ನೋಡಲಿ: ಕೆ.ಎಸ್​. ಈಶ್ವರಪ್ಪ

    ಮಹಾರಾಷ್ಟ್ರದ ಮಧ್ಯಭಾಗದಲ್ಲಿರುವ ಜಲ್ನಾ ಜಿಲ್ಲೆಯಲ್ಲಿ ಮರಾಠ ಮೀಸಲಾತಿಗೆ ಆಗ್ರಹಿಸಿ ಶುಕ್ರವಾರ ಆರಂಭವಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಅಂಬಾಡ್​ ತಾಲ್ಲೂಕಿನಲ್ಲಿ ಧುಲೆ ಹಾಗೂ ಸೊಲ್ಲಾಪುರ ಹೆದ್ದಾರಿಯನ್ನು ತಡೆದು ಪ್ರತಿಭಟನಾ ನಿರತರು ಸಾರಿಗೆ ಹಾಗೂ ಲಾರಿಗೆಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದರು. ಹಿಂಸಾಚಾರ ಸಂಬಂಧ ಪೊಲೀಸರು 360 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದು, ಈ ಪೈಕಿ 16 ಮಂದಿಯನ್ನು ಘಟನೆಯ ಪ್ರಮುಖ ಆರೋಪಿಗಳು ಎಂದು ಗುರುತಿಸಲಾಗಿದೆ.

    ಮನೋಜ್​ ಜಾರಂಗೆ ನೇತೃತ್ವದಲ್ಲಿ ಮೀಸಲಾತಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಾಲಾಗುತ್ತಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದ್ದ ಪ್ರತಿಭಟನಾ ನಿರತರನ್ನು ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದಾಗ ಹಿಂಸಾಚಾರ ಭುಗಿಲೆದ್ದಿತ್ತು. ಹಿಂಸಾಚಾರದಲ್ಲಿ 90ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts