More

    ಪಾಶ್ಚಾತ್ಯರ ಅನುಕರಣೆಯ ಜೀವನ ಶೈಲಿಯಿಂದ ಒತ್ತಡ

    ಶಿವಮೊಗ್ಗ: ಇಂದಿನ ನಮ್ಮ ಪಾಶ್ಚಾತ್ಯ ಪದ್ಧತಿ ಅನುಕರಣೆಯ ಜೀವನ ಶೈಲಿ ಅನೇಕ ಒತ್ತಡಗಳಿಗೆ ಕಾರಣವಾಗುತ್ತಿದೆ ಎಂದು ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಹೇಳಿದರು.

    ಹೊಳೆಹೊನ್ನೂರಿನಲ್ಲಿ ಚಾತುರ್ಮಾಸ್ಯ ಕಾಲದ ಪ್ರತಿ ಭಾನುವಾರ ನಡೆಯುವ ಆಯುರಾತ್ಮ ಆಯುರ್ವೇದ ತಪಾಸಣಾ ಮತ್ತು ಉಚಿತ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಆಶೀರ್ವಚನ ನೀಡಿದರು.
    ಶರೀರವನ್ನು ನಾವು ಚೆನ್ನಾಗಿ ಕಾಪಾಡಿಕೊಳ್ಳಬೇಕು. ಆಗ ಮಾತ್ರ ಸಾಧನಾ ಮಾರ್ಗದಲ್ಲಿ ಸಾಗಲು ಸಾಧ್ಯ. ಯೋಗ, ಪ್ರಾಣಾಯಾಮವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದರು.
    ಚಾತುರ್ಮಾಸ್ಯ ವ್ಯವಸ್ಥಾಪನಾ ಸಮಿತಿಯ ನವರತ್ನ ಶ್ರೀನಿವಾಸಾಚಾರ್ಯ ಮಾತನಾಡಿ, ಶ್ರೀಪಾದಂಗಳವರ ಆಜ್ಞಾನುಸಾರ ಈ 80 ದಿನದಲ್ಲಿ ವಿವಿಧ ಸೇವಾ ಕಾರ್ಯಗಳನ್ನು ನಡೆಸುತ್ತಿದ್ದೇವೆ ಎಂದರು.
    ಅನೇಕ ಭಕ್ತರು ಶಿಬಿರದ ಪ್ರಯೋಜನ ಪಡೆದರು. ರಕ್ತದೊತ್ತಡ, ಮಧುಮೇಹ ತಪಾಸಣೆ ಮಾಡಲಾಯಿತು. ಸೀ ಆರೋಗ್ಯ ಸಮಸ್ಯೆ ಕುರಿತು ಅನೇಕ ಮಹಿಳೆಯರು ಸಲಹೆ ಪಡೆದರು. ಅಗತ್ಯ ಔಷಧಗಳನ್ನು ಉಚಿತವಾಗಿ ವಿತರಿಸಲಾಯಿತು.
    ಡಾ. ಲೋಕನಾಥ ಅವಧಾನಿ, ಡಾ. ಹರೀಶ್ ದೇಶಪಾಂಡೆ, ಡಾ. ಸಂಜನಾ ದೇಶಪಾಂಡೆ, ಡಾ. ಪ್ರಸಾದ ಕುಲಕರ್ಣಿ, ಡಾ. ಅಶ್ವತ್ಥ್ ಮಠ್ ತಪಾಸಣೆ ನಡೆಸಿದರು. ಎಎಲ್‌ಎನ್ ರಾವ್ ಮೆಮೋರಿಯಲ್ ಆಯುರ್ವೇದ ಕಾಲೇಜಿನ ಕೊನೆಯ ವರ್ಷದ ವಿದ್ಯಾರ್ಥಿನಿಯರಾದ ಸಂಜನಾ ರಾವ್, ಸ್ನೇಹಾ, ಮಧುರಾ ಇದ್ದರು.

    ಸಜ್ಜನರ ಅಪಹಾಸ್ಯದಿಂದ ಅನರ್ಥ
    ಒಬ್ಬ ವ್ಯಕ್ತಿ ಅತ್ಯಂತ ಸುಖವಾಗಿ, ನೆಮ್ಮದಿಯಿಂದ ಆದರ್ಶ ಜೀವನ ನಡೆಸಲು ಯಾವ ಸಂದೇಶಗಳು ಬೇಕೋ ಎಲ್ಲವನ್ನೂ ಶ್ರೀಮದ್ ಭಾಗವತ ನಮಗೆ ತಿಳಿಸುತ್ತದೆ ಎಂದು ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥರು ಹೇಳಿದರು.
    ತಮ್ಮ 28ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ ಶ್ರೀಪಾದಂಗಳು ಶ್ರೀ ಸತ್ಯಧರ್ಮರ ಭಾಗವತ ದಶಮ ಸ್ಕಂದ ವ್ಯಾಖ್ಯಾನಾಧಾರಿತ ಅನುಗ್ರಹ ಸಂದೇಶ ನೀಡಿದರು.
    ಇಂದು ಸಮಾಜದಲ್ಲಿ ಸಜ್ಜನರು, ಧಾರ್ಮಿಕರನ್ನು ನೋಡಿ ಅಪಹಾಸ್ಯ ಮಾಡುವ ವಿಕೃತಿ ಹೆಚ್ಚಾಗುತ್ತಿದೆ. ಇಂತಹ ನಿಂದನೆ, ಆಕ್ಷೇಪಗಳಿಂದ ಅನರ್ಥವೇ ಹೊರತು ಯಾವ ಪ್ರಯೋಜನಗಳಿಲ್ಲ ಎಂದರು.
    ಸಭಾ ಕಾರ್ಯಕ್ರಮದಲ್ಲಿ ಅಜಯಾಚಾರ್ಯ ಜೋಷಿ ಪ್ರವಚನ ನೀಡಿದರು. ಬೆಂಗಳೂರಿನ ಜಯತೀರ್ಥ ವಿದ್ಯಾಪೀಠದ ಕುಲಪತಿ ಗುತ್ತಲ ರಂಗಾಚಾರ್ಯ, ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ನವರತ್ನ ಸುಬ್ಬಣ್ಣಾಚಾರ್ಯ, ಖಜಾಂಚಿ ರಾಮಧ್ಯಾನಿ ಅನಿಲ್, ಪಂಡಿತ್ ನವರತ್ನ ಶ್ರೀನಿವಾಚಾರ್ಯ, ನವರತ್ನ ಪುರುಷೋತ್ತಮಾಚಾರ್ಯ, ರಘೂತ್ತಮಾಚಾರ್ಯ ಸಂಡೂರು, ಕೃಷ್ಣಾಚಾರ್ಯ ರಾಯಚೂರು ಮೊದಲಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts