ಸದೃಢ ದೇಹಕ್ಕೆ ಕ್ರೀಡೆ ಸಹಕಾರಿ

blank

ದೇವದುರ್ಗ: ಕ್ರೀಡೆಯಿಂದ ದೈಹಿಕ ಮಾತ್ರವಲ್ಲ ಮಾನಸಿಕ ರೋಗಗಳು ದೂರವಾಗುತ್ತವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹನುಮಂತ್ರಾಯ ಶಾಖೆ ಹೇಳಿದರು.

blank
blank

ಇದನ್ನೂ ಓದಿ: ರಾಣಿಕೆರೆಗೆ ರಾಜಯೋಗ : ಸೋಮೇಶ್ವರದಲ್ಲಿ ಒದಗಿಬಂತು ಅಭಿವೃದ್ಧಿ ಭಾಗ್ಯ: ಅಬ್ಬಕ್ಕ ಜಲಕ್ರೀಡೆಯಾಡುತ್ತಿದ್ದಳೆನ್ನುವ ಐತಿಹ್ಯ

ಪಟ್ಟಣದಲ್ಲಿ ಸರ್ಕಾರಿ ನೌಕರರ ಸಂಘದಿಂದ ಆಯೋಜಿಸಿದ್ದ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾನುವಾರ ಮಾತನಾಡಿದರು. ಶಿಕ್ಷಕರು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಜೆಸ್ಕಾಂ ನೌಕರರು ಕೆಲಸದ ಒತ್ತಡದಿಂದ ದೈಹಿಕ ಹಾಗೂ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ.

ಇವರ ಜತೆ ವರ್ಷವಿಡೀ ರಜೆವಿಲ್ಲದೆ ದುಡಿಯುವ ಪೊಲೀಸರು, ಆರೋಗ್ಯ ಇಲಾಖೆ ನೌಕರರು ಹಾಗೂ ಸಮಾಜದ ನಾಲ್ಕನೇ ಅಂಗದಂತೆ ಕೆಲಸ ಮಾಡುವ ಪತ್ರಕರ್ತರಿಗೆ ಮನೋರಂಜನೆ ನೀಡುವ ದೃಷ್ಟಿಯಿಂದ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ. ಕ್ರೀಡಾಕೂಟದಲ್ಲಿ ಸೋಲುಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದರು.

ತಹಸೀಲ್ದಾರ್ ಚನ್ನಮಲಪ್ಪ ಘಂಟಿ, ಪಿಐ ಎಸ್.ಮಂಜುನಾಥ, ಟಿಎಚ್‌ಒ ಡಾ.ಬನದೇಶ್ವರ, ಸಂಚಾರ ಠಾಣೆ ಪಿಎಸ್‌ಐ ನಾರಾಯಣ, ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಮಹಾದೇವಪ್ಪಗೌಡ ಪಾಟೀಲ್, ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಬಾಬುಅಲಿ ಕರಿಗುಡ್ಡ, ನೌಕರರಾದ ಅಭಿಷೇಕ ರೆಡ್ಡಿ, ವೀರೇಶ, ರಮೇಶ, ಸುರೇಶ, ಪ್ರಭುಗೌಡ ಇತರರಿದ್ದರು.

Share This Article

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…