ಕೇಶ್ಪುರ್: ತೃಣಮೂಲ ಕಾಂಗ್ರೆಸ್ ಪಕ್ಷದ ಎರಡು ತಂಡಗಳ ನಡುವೆ ನಡೆದ ಸಂಘರ್ಷಕ್ಕೆ ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ.
ಪಶ್ಚಿಮ ಬಂಗಾಳದ ಮಿಡ್ನಾಪುರ್ ಜಿಲ್ಲೆಯ ಕೇಶಾಪುರ್ನಲ್ಲಿ ಗುರುವಾರ ರಾತ್ರಿ ಈ ಗಲಭೆ ನಡೆದಿದೆ.
ತೃಣಮೂಲ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರಾದ ಉತ್ತಮ್ ತ್ರಿಪಾಠಿ ಮತ್ತು ಸಂಜಯ್ ಪಾನ್ ಎಂಬಿಬ್ಬರ ಬೆಂಬಲಿಗರ ಮಧ್ಯೆ ಈ ಗಲಾಟೆ ನಡೆದಿದೆ. ಈ ಸಂದರ್ಭ ಅನಿರೀಕ್ಷಿತವಾಗಿ ಸಿಕ್ಕಿಹಾಕಿಕೊಂಡ ಎಂಟನೇ ತರಗತಿಯ ಬಾಲಕ ಶೇಖ್ ಮಜಾಹರ್ ಇರಿತಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಕ್ಷದ ಕಾರ್ಯಕರ್ತ ಶೇಖ್ ನಸೀಂ(42) ಗಂಭೀರ ಗಾಯಗಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ.
ದಾಮೋದರ್ ಚೌಕ್ ಬಳಿ ನಡೆದ ಈ ಗಲಭೆಯಲ್ಲಿ ಕಚ್ಚಾಬಾಂಬ್ಗಳನ್ನು ಬಳಸಿಕೊಳ್ಳಲಾಗಿತ್ತು. ಘಟನೆ ಸಂಬಂಧ ಕೊಲೆ ಕೇಸು ದಾಖಲಿಸಿಕೊಳ್ಳಲಾಗಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. (ಏಜೆನ್ಸೀಸ್)