More

    ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿನಿ; ಹಾಸ್ಟೆಲ್​ನಲ್ಲಿ ನೇತಾಡುತ್ತಿತ್ತು ಶವ!

    ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಗೆ ಬರಲಿಲ್ಲ ಎಂದು ಹಾಸ್ಟೆಲ್​ಗೆ ಹೋಗಿ ನೋಡಿದ ಸಿಬ್ಬಂದಿಗೆ ಕಾಣಿಸಿದ್ದು ನೇತಾಡುತ್ತಿದ್ದ ಶವ. ಇಂಥದ್ದೊಂದು ಪ್ರಕರಣ ನಗರದ ಹಾಸ್ಲೆಲ್​ವೊಂದರಲ್ಲಿ ನಡೆದಿದೆ.

    ಶಿವಾನಿ (21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಜೆಎಸ್​ಎಸ್​ ಕಾಲೇಜ್​ನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಈಕೆ ಪರೀಕ್ಷೆಗೆ ಹಾಜರಾಗದ ಕಾರಣ ಸಿಬ್ಬಂದಿ ಹಾಸ್ಟೆಲ್​ಗೆ ಹೋಗಿ ನೋಡಿದ್ದರು. ಅಲ್ಲಿ ಈಕೆ ಫ್ಯಾನ್​ಗೆ ನೇಣು ಹಾಕಿಕೊಂಡಿರುವುದು ಕಂಡುಬಂದಿತ್ತು.

    ರೂಮ್​ನ ಬಾಗಿಲು ಲಾಕ್​ ಮಾಡಿಕೊಂಡು ಒಳಗಿದ್ದಳು. ಎಷ್ಟು ಕರೆದರೂ ಪ್ರತಿಕ್ರಿಯೆ ಇರದಿದ್ದಾಗ ಕಿಟಕಿ ಗಾಜು ಒಡೆದು ನೋಡಿದ ಸಿಬ್ಬಂದಿಗೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿತ್ತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ವಿಷಯ ಗೊತ್ತಾಗಿದೆ.

    ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು, ಜೆಎಸ್​ಎಸ್​​ ಪ್ರಾಂಶುಪಾಲರ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

    ಆಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಂಶುಪಾಲರು ದೂರಿನಲ್ಲಿ ತಿಳಿಸಿದ್ದಾರೆ. ಆದರೆ ಯಾವುದೇ ಡೆತ್​ನೋಟ್​ ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಜೀವ ಉಳಿಸಲು ಹೋಗಿ ಪ್ರಾಣ ಕಳ್ಕೊಂಡ್ರು!: ಟೋಲ್​ ಗೇಟ್​ನಲ್ಲಿ ಆ್ಯಂಬುಲೆನ್ಸ್ ಪಲ್ಟಿ, ಮೂವರು ಸ್ಥಳದಲ್ಲೇ ಸಾವು..

    ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದ ಅಕ್ಕ ಹೃದಯಾಘಾತದಿಂದ ಸಾವು!

    ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!

    ನಿಮ್ಮೂರಿಗಿನ್ನು ಇವರೇ ಇನ್​ಸ್ಪೆಕ್ಟರ್; ಇಲ್ಲಿದೆ ಪೂರ್ತಿ ಮಾಹಿತಿ: 12 ಡಿವೈಎಸ್‌ಪಿ, 92 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts