ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಗೆ ಬರಲಿಲ್ಲ ಎಂದು ಹಾಸ್ಟೆಲ್ಗೆ ಹೋಗಿ ನೋಡಿದ ಸಿಬ್ಬಂದಿಗೆ ಕಾಣಿಸಿದ್ದು ನೇತಾಡುತ್ತಿದ್ದ ಶವ. ಇಂಥದ್ದೊಂದು ಪ್ರಕರಣ ನಗರದ ಹಾಸ್ಲೆಲ್ವೊಂದರಲ್ಲಿ ನಡೆದಿದೆ.
ಶಿವಾನಿ (21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಜೆಎಸ್ಎಸ್ ಕಾಲೇಜ್ನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಈಕೆ ಪರೀಕ್ಷೆಗೆ ಹಾಜರಾಗದ ಕಾರಣ ಸಿಬ್ಬಂದಿ ಹಾಸ್ಟೆಲ್ಗೆ ಹೋಗಿ ನೋಡಿದ್ದರು. ಅಲ್ಲಿ ಈಕೆ ಫ್ಯಾನ್ಗೆ ನೇಣು ಹಾಕಿಕೊಂಡಿರುವುದು ಕಂಡುಬಂದಿತ್ತು.
ರೂಮ್ನ ಬಾಗಿಲು ಲಾಕ್ ಮಾಡಿಕೊಂಡು ಒಳಗಿದ್ದಳು. ಎಷ್ಟು ಕರೆದರೂ ಪ್ರತಿಕ್ರಿಯೆ ಇರದಿದ್ದಾಗ ಕಿಟಕಿ ಗಾಜು ಒಡೆದು ನೋಡಿದ ಸಿಬ್ಬಂದಿಗೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿತ್ತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ವಿಷಯ ಗೊತ್ತಾಗಿದೆ.
ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು, ಜೆಎಸ್ಎಸ್ ಪ್ರಾಂಶುಪಾಲರ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಆಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಂಶುಪಾಲರು ದೂರಿನಲ್ಲಿ ತಿಳಿಸಿದ್ದಾರೆ. ಆದರೆ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಜೀವ ಉಳಿಸಲು ಹೋಗಿ ಪ್ರಾಣ ಕಳ್ಕೊಂಡ್ರು!: ಟೋಲ್ ಗೇಟ್ನಲ್ಲಿ ಆ್ಯಂಬುಲೆನ್ಸ್ ಪಲ್ಟಿ, ಮೂವರು ಸ್ಥಳದಲ್ಲೇ ಸಾವು..
ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!