ಬೆಂಗಳೂರು: ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯೊಬ್ಬನಿಗೆ ಉಪನ್ಯಾಸಕರೊಬ್ಬರು ಟೆರರಿಸ್ಟ್ ಎಂದು ಕರೆದಿದ್ದಕ್ಕೆ, ಆ ವಿದ್ಯಾರ್ಥಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಅವರನ್ನು ಅಮಾನತು ಕೂಡ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಈ ಘಟನೆ ನಡೆದಿದೆ. ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಉಗ್ರ ಅಜ್ಮಲ್ ಕಸಬ್ಗೆ ಹೋಲಿಸಿ ಮಾತಾಡಿದ್ದಕ್ಕೆ ಪ್ರೊಫೆಸರ್ರನ್ನು ತರಗತಿಯಿಂದ ಹೊರ ಹಾಕಿ ಅಮಾನತುಗೊಳಿಸಲಾಗಿದೆ.
ವಿದ್ಯಾರ್ಥಿಯನ್ನು ಟೆರರಿಸ್ಟ್ಗೆ ಹೋಲಿಸಿ ಮಾತನಾಡಿದ್ದಕ್ಕೆ ಆತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಘಟನೆ ಕಳೆದ ವಾರ ನಡೆದಿದ್ದು, ಆ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪ್ರೊಫೆಸರ್ ವಿರುದ್ಧ ಕ್ರಮ ಜರುಗಿದೆ. ಶಿಕ್ಷೆಗೊಳಗಾಗಿದ್ದ ಅಜ್ಮಲ್ ಕಸಬ್ಗೆ ತನ್ನ ಹೆಸರನ್ನು ಹೋಲಿಸಿ ಮಾತನಾಡಿದ್ದಕ್ಕೆ ಆತ ತರಗತಿಯಲ್ಲೇ ಪ್ರೊಫೆಸರ್ರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ. ಆಗ ಪ್ರೊಫೆಸರ್ ‘ಸಾರಿ’ ಎಂದಿರುವುದೂ ವಿಡಿಯೋದಲ್ಲಿದೆ.
ನೀರಿಗೆ ಬಿತ್ತು ಪ್ರಪೋಸ್ ಮಾಡಲೆಂದು ತಂದ ಉಂಗುರ; ಸಮುದ್ರಕ್ಕೇ ಧುಮುಕಿದ ಪ್ರಿಯಕರ: ಆಮೇಲೇನಾಯ್ತು!
ಮಗಳ ಮದುವೆಗೆ ಕೆಲವು ಗಂಟೆಗಳು ಬಾಕಿ ಇರುವಾಗ ನೇಣು ಹಾಕಿಕೊಂಡ ತಂದೆ; ಮದ್ಯಪಾನ ಮಾಡಿದ್ದಕ್ಕೆ ಬೈದಿದ್ದೇ ಕಾರಣ?