More

    ಕಬಡ್ಡಿ ಆಡುತ್ತಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ; ಕುಸಿದು ಬಿದ್ದು ಸಾವು

    ಆನೇಕಲ್: ರಾಜ್ಯ ಮಾತ್ರವಲ್ಲ ದೇಶಾದ್ಯಂತ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿದ್ದು, ಆತಂಕ ಮೂಡಿಸಿದ್ದರೂ ಆ ಕುರಿತ ಯಾವುದೇ ಅಧ್ಯಯನ ನಡೆಯುತ್ತಿಲ್ಲ. ಮತ್ತೊಂದೆಡೆ ರಾಜಕಾರಣಿಗಳು ಕೂಡ ಆ ಬಗ್ಗೆ ಸೊಲ್ಲೆತ್ತುತ್ತಿಲ್ಲ. ಈ ಎಲ್ಲದರ ಮಧ್ಯೆ ಹೃದಯಾಘಾತದ ಸಾವಿನ ಪ್ರಕರಣಗಳ ಸರದಿ ಮುಂದುವರಿದಿದ್ದು, ಇಂದು ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವಿಗೀಡಾಗಿದ್ದಾಳೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ನ ಅತ್ತಿಬೆಲೆಯಲ್ಲಿ ಈ ದುರಂತ ಸಂಭವಿಸಿದೆ. ಸಂಗೀತಾ ಎಂಬ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾವಿಗೀಡಾದ ಹುಡುಗಿ. ಈಕೆ ಇಲ್ಲಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಧಾರವಾಡ ಮೂಲದ ಈ ವಿದ್ಯಾರ್ಥಿನಿ, ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ವಾಸವಿದ್ದಳು.

    ಕಾಲೇಜಿನಲ್ಲಿ ಇಂದು ಕ್ರೀಡಾ ಉತ್ಸವ ಆಯೋಜನೆ ಮಾಡಿದ್ದು, ಈಕೆ ಮಹಿಳೆಯರ ಕಬಡ್ಡಿ ತಂಡದಲ್ಲಿದ್ದಳು. ಕಬಡ್ಡಿ ಆಡುವಾಗ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದ ಈಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಸಾವಿಗೀಡಾದಳು. ಇಂದು ಸಂಜೆ ಐದರ ಸುಮಾರಿಗೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಮೃತಪಟ್ಟ ಹಿನ್ನೆಲೆಯಲ್ಲಿ ನಾಳೆ ಈ ಶಾಲಾ- ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

    ಮೈದಾನದಲ್ಲೇ ಕುಸಿದು ಬಿದ್ದು ಸಾವಿಗೀಡಾದ ಕ್ರಿಕೆಟಿಗ; ರನ್​ಗಾಗಿ ಓಡುತ್ತಿದ್ದಾಗ ಹೃದಯಾಘಾತ..

    ರಂಗ ವೇದಿಕೆಯಲ್ಲೇ ಹೃದಯಾಘಾತ; ನಾಟಕ ಮಾಡುತ್ತಿದ್ದಾಗಲೇ ಪ್ರಾಣ ಬಿಟ್ಟ ಮತ್ತೊಬ್ಬ ಕಲಾವಿದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts