More

    ಶಾಲೆಯ ಆವರಣದಲ್ಲಿ ಆಡುತ್ತಿದ್ದ ಈ ಪುಟ್ಟ ಬಾಲಕನ ಸಾವು ಅಲ್ಲೇ ಇತ್ತು..

    ಸವಣೂರ: ಶಾಲೆ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಕಾಂಪೌಂಡ್​ ಗೇಟ್ ಬಿದ್ದು ಮೃತಪಟ್ಟ ಘಟನೆ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಇರ್ಷಾದ ಜಿಲಾನಿ ಹಂಟೆಗಾಲರ (10) ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ. ಇದೇ ವೇಳೆ ಆತನ ಮೈಮೇಲೆ ಗೇಟ್​ ಮುರಿದುಬಿದ್ದಿದೆ. ತಲೆಗೆ ತೀವ್ರ ಏಟಾಗಿದ್ದ ಬಾಲಕನನ್ನು ಆಸ್ಪತ್ರೆಗೆ ಸೇರಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.

    ಡಿಡಿಪಿಐ ಅಂದಾನಪ್ಪ ವಡಗೇರಿ, ಬಿಇಒ ಐ.ಬಿ.ಬೆನಕೊಪ್ಪ ಮೃತ ಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದು, ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts